ಸಿಎಂ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಾಜಿ ಸಂಸದನಿಗೆ 3 ವರ್ಷ ಜೈಲು
ಗೆಹನಾಬಾದ್,ಜು.31- ಬಿಹಾರದ ಮುಖ್ಯಮಂತ್ರಿ ನಿತೀಶ್ಕುಮಾರ್ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಮಾಜಿ ಸಂಸದರಿಗೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ದಂಡ ವಿಧಿಸಲಾಗಿದೆ. ಗೆಹನಾಬಾದ್ ಜಿಲ್ಲಾ ನ್ಯಾಯಾಲಯ ಆರ್ಎಲ್ಎಸ್ಪಿ ಸಂಸದ ಅರುಣ್ಕುಮಾರ್ ಅವರಿಗೆ ಶಿಕ್ಷೆ ವಿಧಿಸಿದೆ. 2015ರ ಜೂನ್ನಲ್ಲಿ ಅರುಣ್ಕುಮಾರ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಬರ್ಹಮತ್ತು ಮೊಕಂ ಪ್ರದೇಶದಲ್ಲಿ ಭೂಮಿಹಾರ್ಸ್ಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡಲಾಗುತ್ತಿದೆ. ನಾವೇನು ಬಳೆ, ಸೀರೆ ತೊಟ್ಟಿಲ್ಲ. ಮುಖ್ಯಮಂತ್ರಿಗಳ ಎದೆಮೂಳೆಗಳನ್ನು ಮುರಿಯುತ್ತೇವೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು […]
ಕೆಟ್ಟದಾಗಿ ಕಾಮೆಂಟ್ ಮಾಡಿದ ಯುವಕನ ಕೊಲೆ
ಮೈಸೂರು,ಜು.13- ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ ಯುವಕನನ್ನು ಕೊಲೆ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದೆ. ಬೀರೇಶ (23) ಕೊಲೆಯಾಗಿದ್ದು, ನಿತಿನ್ ಮತ್ತು ಮನು ಕೊಲೆ ಆರೋಪಿ ಗಳಾಗಿದ್ದಾರೆ. ಜಿಲ್ಲಾ ಹುಣಸೂರು ಪಟ್ಟಣದ ಸರಸ್ವತಿ ಪ್ಲಾಜ್ ಬಳಿ ಈ ಘಟನೆ ನಡೆದಿದೆ. ಬೈಕ್ನಲ್ಲಿ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ನಿತಿನ್ ಬಗ್ಗೆ ಬೀರೇಶ್ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಕೋಪಗೊಂಡು ಈ ಕೃತ್ಯ ಎಸಗಿದ್ದಾರೆ. ಚಾಕು ಇರಿತದಿಂದ ಗಾಯಗೊಂಡಿದ್ದ ಬೀರೇಶ್ ಮೈಸೂರಿನ […]