ಆಸಿಡ್ ದಾಳಿ ಸಂತ್ರಸ್ತರಿಗೆ 10 ಸಾವಿರ ಮಾಸಾಶನ

ಬೆಂಗಳೂರು, ಫೆ.17- ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ನೀಡುತ್ತಿರುವ ಮಾಸಾಶನವನ್ನು 3 ಸಾವಿರ ರೂ. ಗಳಿಂದ 10 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ತಿಳಿಸಿದ್ದಾರೆ. ಆಸಿಡ್ ದಾಳಿಗೊಳಗಾದ ಸಂತ್ರಸ್ತರಿಗೆ ಬದುಕಿನಲ್ಲಿ ಇನ್ನಷ್ಟು ಭದ್ರತೆಯನ್ನು ಒದಗಿಸಲು ರಾಜೀವ್ ಗಾಂ ವಸತಿ ನಿಗಮದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಬೊಮ್ಮಾಯಿ ಬಜೆಟ್ – 2023-2024 (Live Updates) […]
ಮೃತಪಟ್ಟ ಜಾನುವಾರುಗಳ ಪರಿಹಾರ ಮೊತ್ತ ಹೆಚ್ಚಳಕ್ಕೆ ಚರ್ಚೆ

ಬೆಂಗಳೂರು,ಫೆ.13-ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳ ಪರಿಹಾರ ಮೊತ್ತ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಪಶು ಸಂಗೋಪನ ಸಚಿವ ಪ್ರಭು ಚವ್ಹಾಣ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶಂಪುರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚರ್ಮಗಂಟು ರೋಗದಿಂದ ಮೃತಪಟ್ಟ ಹಸುಗೆ 20 ಸಾವಿರ, ಕರುಗೆ 5 ಸಾವಿರದಂತೆ 37 ಕೋಟಿ ಪರಿಹಾರ ನೀಡಲಾಗಿದೆ. ದೇಶದಲ್ಲಿ ಯಾವುದೇ ರಾಜ್ಯದಲ್ಲಿ ಪರಿಹಾರ ನೀಡಲಾಗುತ್ತಿಲ್ಲ. ನಮ್ಮ ರಾಜ್ಯದಲ್ಲಿ ನೀಡಲಾಗುತ್ತಿದೆ ಎಂದರು. ಆಗ ಬಂಡೆಪ್ಪ […]