ಹಗರಿಬೊಮ್ಮನಹಳ್ಳಿಯಲ್ಲಿ ಕಮಲ ಅರಳಿಸಲು ಲಕ್ಷೀನಾರಾಯಣ ಸಂಕಲ್ಪ

ಬೆಂಗಳೂರು : ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷೀನಾರಾಯಣ ಅವರು, ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಮೀಸಲು ಕ್ಷೇತ್ರದಿಂದ ಕಣಕ್ಕೀಳಿಯಲು ಸಜ್ಜಾಗಿದ್ದಾರೆ.ಪಕ್ಷದ ವರಿಷ್ಟರ ಸೂಚನೆಯಂತೆ ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಕರ್ತರ ಜೊತೆ ಸಂಘಟನೆ ಆರಂಭಿಸಿರುವ ಅವರು, ಮತದಾರರ ಮನವೊಲಿಕೆಗೆ ನಾನಾ ಕಸರತ್ತು ನಡೆಸುತ್ತಿದ್ದಾರೆ.2008 ರಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ನೇಮಿರಾಜ್ ನಾಯಕ್ ಒಂದು ಬಾರಿ ಗೆಲುವು ಸಾಧಿಸಿದ್ದರು. 2013 ಹಾಗೂ 2018 ರಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮನಾಯಕ್ ಎರಡು ಬಾರಿ ಗೆದ್ದು, ಇದೀಗ […]

ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಸಿದ್ದುಗೆ ಮುಗುಬಿದ್ದ ಕಾರ್ಯಕರ್ತರು

ಬೆಂಗಳೂರು, ಫೆ.14- ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿಯಿಂದಲೇ ಮತ್ತೆ ಸ್ಪರ್ಧೆ ಮಾಡಬೇಕು ಎಂದು ಸಾವಿರಾರು ಮಂದಿ ಅಭಿಮಾನಿಗಳು, ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಒತ್ತಾಯಿಸಿದ್ದಾರೆ. ಬಾದಾಮಿಯಿಂದ ಸುಮಾರು 250ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.ಬಾದಾಮಿಯಿಂದ ಮೂರನೇ ಬಾರಿ ಕಾರ್ಯಕರ್ತರು ಬೆಂಗಳೂರಿಗೆ ಬಂದು ಸಿದ್ದರಾಮಯ್ಯಗೆ ಒತ್ತಡ ಹೇರುತ್ತಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನು ಬದಲಾವಣೆ ಮಾಡಬೇಕು. ಬಾದಾಮಿಯಿಂದಲೇ […]