ಕೋರ್ಟ್ ಆದೇಶ ಪಾಲಿಸುವಂತೆ ಮಕ್ಕಳು ಹಾಗೂ ಪೋಷಕರಲ್ಲಿ ಸಿಎಂ ಮನವಿ
ಬೆಂಗಳೂರು,ಫೆ.16- ರಾಜ್ಯಾದ್ಯಂತ ಇಂದಿನಿಂದ ಪದವಿ, ಪದವಿಪೂರ್ವ ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕೆಂದು ಪೋಷಕರು ಹಾಗೂ ಮಕ್ಕಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರು ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಲೇಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕಾಲೇಜುಗಳನ್ನು ಪುನರಾರಂಭಿಸಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕೆಂದು ಹೇಳಿದರು. ನ್ಯಾಯಾಲಯದ ಆದೇಶವನ್ನು ನಾವು ಪಾಲನೆ ಮಾಡಬೇಕು. ಕೋರ್ಟ್ನ ಮಧ್ಯಂತರ ಆದೇಶ ಪಾಲಿಸಿ ಅಂತಿಮ ತೀರ್ಪಿನವರೆಗೂ ಸಂಯಮದಿಂದ ಕಾಯಬೇಕು. ಇದು ನನ್ನ ಕಳಕಳಿಯ ಮನವಿ […]