ಸರ್ಕಾರಿ ಅಧಿಕಾರಿಗಳು ಆಸ್ತಿ ದಾಖಲೆ ಸಲ್ಲಿಸಲು ಮಾ. 31 ಕೊನೆ ದಿನ

ಬೆಂಗಳೂರು,ಫೆ.4- ಸರ್ಕಾರಿ ನೌಕರರು, ಅಧಿಕಾರಿಗಳು ಆಸ್ತಿ ವಿವರಗಳನ್ನು ಡಿಸೆಂಬರ್ 31ರ ಬದಲಿಗೆ ಮಾರ್ಚ್ 31ರೊಳಗೆ ಅಗತ್ಯ ದಾಖಲೆಗಳೊಂದಿಗೆ ಎಲ್ಲಾ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ನೌಕರರು ತಮ್ಮ ಚರ-ಸ್ಥಿರಾಸ್ತಿಯನ್ನು ವಿವರಗಳ ಬಗ್ಗೆ ಇನ್ನು ಪ್ರತಿ ವರ್ಷದ ಡಿಸೆಂಬರ್ 31ರ ಅಂತ್ಯಕ್ಕೆ ಸಲ್ಲಿಸುತ್ತಿದ್ದ ವಿವರಗಳನ್ನು ಇನ್ನು ಮುಂದೆ ಮಾರ್ಚ್ 31ರ ಅಂತ್ಯಕ್ಕೆ ಸಲ್ಲಿಸಬೇಕು. ರಾಜ್ಯ ಬಿಜೆಪಿ […]
ಪಂಚಮಸಾಲಿ ಮೀಸಲಾತಿಗೆ ಸರ್ಕಾರ ಸಮ್ಮತಿ..?

ಬೆಳಗಾವಿ,ಡಿ.29- ಬಹುದಿನಗಳ ಬೇಡಿಕೆಯಂತೆ ರಾಜ್ಯ ಸರ್ಕಾರ ಕೊನೆಗೂ ಪಂಚಮಶಾಲಿ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಿಸಿದ ಬೆನ್ನಲ್ಲೇ ಪಂಚಮಶಾಲಿ ಸಮುದಾಯಕ್ಕೂ ಶೇ.4ರಿಂದ 5ರಷ್ಟು ಮೀಸಲಾತಿ ಹೆಚ್ಚಳ ಮಾಡುವ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಿದೆ. ಇಲ್ಲಿ ಸುವರ್ಣಸೌಧದಲ್ಲಿ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಪಂಚಮಶಾಲಿ ಸಮುದಾಯಕ್ಕೆ ಮೀಸಲಾತಿ […]
ರಸ್ತೆ ಗುಂಡಿ ಮುಚ್ಚಲು PWD ಅಧಿಕಾರಿಗಳ ರಜೆ ರದ್ದುಗೊಳಿಸಿ ಆದೇಶ

ಲಖ್ನೋ,ನ.1- ರಾಜ್ಯದ ರಸ್ತೆಗಳನ್ನು ಗುಂಡಿ ಮುಕ್ತ ಮಾಡುವಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶದ ನೀಡಿರುವ ಹಿನ್ನಲೆಯಲ್ಲಿ ಎಲ್ಲಾ ಪಿಡಬ್ಲ್ಯೂಡಿ ಅಧಿಕಾರಿಗಳ ರಜೆಯನ್ನು ಮುಂದಿನ ತಿಂಗಳು ರದ್ದುಗೊಳಿಸಿ ಆದೇಶಿಸಲಾಗಿದೆ. ತ್ವರಿತವಾಗಿ ರಸ್ತೆಗುಂಡಿ ಮುಚ್ಚುವ ಕೆಲಸ ಮಾಡಬೇಕಾಗಿರುವುದರಿಂದ ಯಾವುದೇ ಪಿಡಬ್ಲ್ಯುಡಿ ಅಕಾರಿಗಳಿಗೆ ಮುಂದಿನ ತಿಂಗಳು ರಜೆ ಮಂಜೂರು ಮಾಡಬಾರದು ಎಂದು ರಾಜ್ಯ ಸರ್ಕಾರ ಎಲ್ಲ ಮುಖ್ಯ ಎಂಜಿನಿಯರ್ಗಳಿಗೆ ಸೂಚನೆ ನೀಡಿದೆ. ಯಾವುದೇ ಪಿಡಬ್ಲ್ಯುಡಿ ಅಕಾರಿಗಳು ಅನಿವಾರ್ಯ ಸಂದರ್ಭಗಳಲ್ಲಿ ರಜೆ ತೆಗೆದುಕೊಳ್ಳಲು ಅಗತ್ಯಬಿದ್ದರೆ ಅದರ ಅನುಮೋದನೆಗಾಗಿ ಪ್ರಧಾನ ಕಚೇರಿಗೆ ಕಳುಹಿಸಲಾಗುತ್ತದೆ. […]