ಮಾರಾಟ ಮಾಡಲು ಯತ್ನಿಸುತ್ತಿದ್ದ 9 ಜಿಂಕೆ ಕೊಂಬುಗಳ ವಶ

ಬೆಂಗಳೂರು,ಜ.25-ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ವಿಲ್ಸನ್‍ಗಾರ್ಡನ್ ಠಾಣೆ ಪೊಲೀಸರು ಬಂಧಿಸಿ 9 ಜಿಂಕೆ ಕೊಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ದಿಣ್ಣೂರು ಗ್ರಾಮದ ನಿವಾಸಿ ನರಸಿಂಹಪ್ಪ(60) ಬಂಧಿತ ವ್ಯಕ್ತಿ. ಈತ ಶಾಂತಿನಗರದ ಬಸ್ ಡಿಪೋ ಸಮೀಪ ಚೀಲದಲ್ಲಿ ಜಿಂಕೆ ಕೊಂಬುಗಳನ್ನು ತುಂಬಿಕೊಂಡು ಬಂದು ಮಾರಾಟ ಮಾಡಲು ಯತ್ನಿಸುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ನರಸಿಂಹಪ್ಪನನ್ನು ಬಂಸಿ 9 ಜಿಂಕೆ ಕೊಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಜಿಂಕೆ […]