ಆಟೋ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ಮಂಡಳಿ ರಚಿಸಲು ಆಗ್ರಹ

ಬೆಂಗಳೂರು, ಫೆ.15- ರಾಜ್ಯದಲ್ಲಿನ ಆಟೋರಿಕ್ಷಾ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ನಿಗಮ ಅಥವಾ ಮಂಡಳಿ ರಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿಂದು ಆಗ್ರಹಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರಿದ್ದು, ಬಡ ಮಧ್ಯಮ ವರ್ಗದ ಜನರು, ಆಟೋರಿಕ್ಷಾವನ್ನು ಅವಲಂಬಿಸಿದ್ದಾರೆ. ಆದರೆ, ಆಟೋರಿಕ್ಷಾ ಚಾಲಕರಿಗೆ ಇಎಸ್ಐ, ಪಿಎಫ್, ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯವಿಲ್ಲ. ರಿಕ್ಷಾ ಚಾಲಕರು ಎಲ್ಲಾ ಜಾತಿ ವರ್ಗದವರು ಇದ್ದಾರೆ. […]

20 ಸಾವಿರ ಕೋಟಿ ರೂ.ಗಳ ಬಿಲ್ ಬಿಡುಗಡೆಗೆ ಗುತ್ತಿಗೆದಾರರ ಆಗ್ರಹ

ಬೆಂಗಳೂರು,ಜ.18- ಬಾಕಿ ಇರುವ 20 ಸಾವಿರ ಕೋಟಿ ರೂ.ಗಳ ಬಿಲ್ ಬಿಡುಗಡೆಗೆ ಒತ್ತಾಯಿಸಿ ಇಂದು ಗುತ್ತಿಗೆದಾರರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಸಾವಿರಾರು ಪದಾಕಾರಿಗಳು ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಿ 40 ಪರ್ಸೆಂಟ್ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಮಂಜುನಾಥ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನಮಗೆ ಸರ್ಕಾರದಿಂದ ಸುಮಾರು 20 ಸಾವಿರ ಕೋಟಿ ರೂ.ಗಳ ಬಿಲ್ ಬರಬೇಕಿದೆ. […]