‘ಇಂಜಿನಿಯರ್ಸ್ ಡೇ’ : ಪ್ರಧಾನಿ ಮೋದಿ ಶುಭಾಶಯ

ನವದೆಹಲಿ, ಸೆ 15 – ಭವ್ಯ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿರುವ ನುರಿತ ಮತ್ತು ಪ್ರತಿಭಾವಂತ ಇಂಜಿನಿಯರ್‍ಗಳ ಸಮೂಹವನ್ನು ಹೊಂದಿರುವ ಭಾರತ ಪುನೀತ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಂಜಿನಿಯರ್ ದಿನವಾದ ಇಂದು ಜನತೆಗೆ ಶುಭಾಶಯ ಕೋರಿರುವ ಅವರು, ಎಂಜಿನಿಯರಿಂಗ್ ಕೆಲಸಗಳ ಪ್ರವರ್ತಕರಿಗೆ ಮನ್ನಣೆ ನೀಡಿದ ಹಿಂದಿನ ಮೈಸೂರು ಸಾಮ್ರಾಜ್ಯದ ಅರಸರು ಮತ್ತು ದಿವಾನರಾಗಿದ್ದ ಭಾರತರತ್ನ ಮೇದಾವಿ ಇಂಜಿನಿಯರ್ ರಾಜನೀತಿಜ್ಞ ಎಂ.ವಿಶ್ವೇಶ್ವರಯ್ಯಅವರನ್ನು ಸ್ಮರಿಸಿ ಅವರ ಜನ್ಮದಿನವನ್ನು ಎಂಜಿನಿಯರ್ ದಿನ ಆಚರಿಸಲಾಗುತ್ತದೆ. ಎಲ್ಲ ಎಂಜಿನಿಯರ್‍ಗಳಿಗೆ ಶುಭಾಶಯಗಳು ಎಂದು […]

ಇನ್ನು ಮುಂದೆ ಜಿಲ್ಲಾ ಕೇಂದ್ರಗಳಲ್ಲೂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ : ಸಿಎಂ

ಬೆಂಗಳೂರು,ಸೆ.15- ವಿಶ್ವವಿಖ್ಯಾತ ಎಂಜಿನಿಯರ್ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆಯನ್ನು ಇನ್ನು ಮುಂದೆ ರಾಜ್ಯ ಜಿಲ್ಲಾ ಕೇಂದ್ರಗಳಲ್ಲೂ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮ ದಿನದ ಪ್ರಯುಕ್ತ ಕೆ.ಆರ್.ವೃತ್ತದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಸರ್ಕಾರವೇ ಇಂಜಿನಿಯರಿಂಗ್ ದಿನಾಚರಣೆ ಆಚರಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಮುಂದಿನ ವರ್ಷದಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಂಜಿನಿಯರ್ಸ್ ದಿನ ಆಚರಿಸುತ್ತೇವೆ ಎಂದರು. ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆಯನ್ನು ಈವರೆಗೂ ಬೆಂಗಳೂರಿನಲ್ಲಿ ಮಾತ್ರ ಆಚರಿಸಲಾಗುತ್ತಿತ್ತು. ಮುಂದಿನ […]