ಲಾಲ್‍ಬಾಗ್‍ನಲ್ಲಿ ವೈಭವದ ಫಲಪುಷ್ಪ ಪ್ರದರ್ಶನ ಆರಂಭ

ಬೆಂಗಳೂರು,ಜ.20- ನಗರದ ಜನತೆಯ ಪ್ರಮುಖ ಆಕರ್ಷಣೆಗಳಲ್ಲೊಂದಾದ ಬಹುನಿರೀಕ್ಷಿತ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‍ಬಾಗ್‍ನ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ 10 ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ನೀಡಿದರು. ಗಣರಾಜ್ಯೋತ್ಸವದ ಅಂಗವಾಗಿ ಪ್ರತಿ ವರ್ಷ ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಮೊದಲ ದಿನದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ, ತೋಟಗಾರಿಕೆ ಸಚಿವ ಮುನಿರತ್ನ ಮತ್ತಿತರ ಅಧಿಕಾರಿಗಳು ಸಂಪ್ರದಾಯದಂತೆ ಚಾಲನೆ ನೀಡಿ ಶುಭ ಕೋರಿದರು. ಇಂದಿನಿಂದ ಒಟ್ಟು 10 […]

ಈ ಬಾರಿ ಬೆಂಗಳೂರು ಇತಿಹಾಸ ತಿಳಿಸುವ ಫಲಪುಷ್ಪ ಪ್ರದರ್ಶನ : ಸಚಿವ ಮುನಿರತ್ನ

ಬೆಂಗಳೂರು,ಜ.16- ಉದ್ಯಾನಗರಿ ಬೆಂಗಳೂರಿನ ಇತಿಹಾಸ ತಿಳಿಸುವ ಮೂಲ ಉದ್ದೇಶ ಹೊಂದಿದ್ದು, ಇದನ್ನೇ ಮುಖ್ಯ ಗುರಿಯಾಗಿಸಿಕೊಂಡು ಈ ಭಾರಿಯ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಜ.20ರಿಂದ 30ರ ವರೆಗೆ ಸಸ್ಯಕಾಶಿ ಲಾಲ್‍ಬಾಗ್‍ನಲ್ಲಿ ಆಯೋಜಿಸಲಾಗಿದೆ ಎಂದು ತೋಟಗಾರಿಕ ಸಚಿವ ಮುನಿರತ್ನ ತಿಳಿಸಿದರು. ಲಾಲ್‍ಬಾಗ್‍ನಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪುಷ್ಪಗಳಲ್ಲಿ ಬೆಂಗಳೂರಿನ ಇತಿಹಾಸ ತಿಳಿಸುವ ಕಲಾಕೃತಿಗಳು ಪ್ರೇಕ್ಷಕರ ಮನಸೆಳೆಯಲಿದೆ. ಈ ಭಾರಿ ಸುಮಾರು 10 ರಿಂದ 12 ಲಕ್ಷ ಜನರು ಇಲ್ಲಿಗೆ ಭೇಟಿ ನೀಡುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು. ವಿದೇಶಗಳಿಂದ […]

ಗೌರಿ-ಗಣೇಶ ಹಬ್ಬ : ಗಗನಕ್ಕೇರಿದ ಹೂ-ಹಣ್ಣಿನ ಬೆಲೆ, ಆದರೂ ಮಾರುಕಟ್ಟೆಗಳಲ್ಲಿ ಜನಜಂಗುಳಿ

ಬೆಂಗಳೂರು,ಆ.29-ಕೊರೊನಾ ಕಾಟದಿಂದಾಗಿ ಕಳೆದ ಎರಡು ವರ್ಷಗಳಿಂದ ಹಬ್ಬ ಆಚರಿಸಲು ಸಾಧ್ಯವಾಗದ ಹಿನ್ನಲ್ಲೆಯಲ್ಲಿ ಈ ಬಾರಿ ಗೌರಿ-ಗಣೇಶ ಹಬ್ಬ ಕಳೆ ಕಟ್ಟಿದ್ದು, ಬೆಲೆ ಏರಿಕೆಯ ನಡುವೆಯೂ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಜನ ಗೌರಿ-ಗಣೇಶ ಹಬ್ಬಕ್ಕೆ ಭರ್ಜರಿ ಶಾಪಿಂಗ್ ನಡೆಸುತ್ತಿದ್ದಾರೆ. ಎರಡು ವರ್ಷಗಳ ನಂತರ ಹಬ್ಬ ಆಚರಣೆಗೆ ಅವಕಾಶ ಸಿಕ್ಕಿರುವುದರಿಂದ ಈ ಬಾರಿ ಗೌರಿ-ಗಣೇಶ ಹಬ್ಬ ಆಚರಣೆಗೆ ಜನ ಮುಗಿಬಿದ್ದಿದ್ದಾರೆ. ಹೀಗಾಗಿ ನಗರದ ಕೆ.ಆರ್ ಮಾರ್ಕೆಟ್ ಜನರಿಂದ ತುಂಬಿ ತುಳುಕುತ್ತಿದೆ ಮಾತ್ರವಲ್ಲ ನಗರದಲ್ಲಿರುವ ಎಲ್ಲಾ ಮಾರುಕಟ್ಟೆಗಳಲ್ಲೂ ಜನ ಜಂಗುಳಿ ಕಂಡು […]

ಲಾಲ್‍ಬಾಗ್‍ ಫಲಪುಷ್ಪ ಪ್ರದರ್ಶನಕ್ಕೆ ಹರಿದು ಬಂತು ಜನಸಾಗರ

ಬೆಂಗಳೂರು,ಆ.15- ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಲಾಲ್‍ಬಾಗ್‍ನಲ್ಲಿ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನಕ್ಕೆ ಇಂದು ಜನಸಾಗರವೇ ಹರಿದುಬಂದಿದೆ. ಅಮೃತ ಮಹೋತ್ಸವದ ನಿಮಿತ್ತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯವರು ಇಂದು ಬಸ್‍ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಮಾಡಿರುವುದರಿಂದ ನಗರದ ಮೂಲೆ ಮೂಲೆಗಳಿಂದ ಲಾಲ್‍ಬಾಗ್‍ನತ್ತ ಜನರ ದಂಡೇ ಹರಿದುಬಂದಿತ್ತು. ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘ ಹಮ್ಮಿಕೊಂಡಿರುವ ವರನಟ ಡಾ.ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ ಬೀಳುವ ಹಿನ್ನಲೆಯಲ್ಲಿ ಕೆಂಪುತೋಟ ಜನರಿಂದ ತುಂಬಿ ತುಳುಕುತ್ತಿದೆ. […]

ಪುಷ್ಪಗಳ ಮಧ್ಯೆ ಪುನೀತ್, ಫಲಪುಷ್ಪ ಪ್ರದರ್ಶನದಲ್ಲಿ ಅಪ್ಪು ಪ್ರತ್ಯಕ್ಷ

ಬೆಂಗಳೂರು,ಆ.5- ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಗಳಿಗಾಗಿ ರದ್ದುಪಡಿಸಿದ್ದ ಬಹು ಆಕರ್ಷಣೆಯ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಕನ್ನಡ ಚಿತ್ರರಂಗದ ಕರ್ನಾಟಕ ರತ್ನದ್ವಯರಾದ ಡಾ.ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಅವರ ಪುಷ್ಪಾಲಂಕೃತ ಪ್ರತಿಮೆಗಳು ಎಲ್ಲರನ್ನು ಆಕರ್ಷಿಸುತ್ತಿವೆ. ಲಾಲ್‍ಬಾಗ್‍ನಲ್ಲಿ ಇಂದಿನಿಂದ ಆರಂಭವಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತೋಟಗಾರಿಕೆ ಸಚಿವ ಮುನಿರತ್ನ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ಪುನೀತ್ ರಾಜ್‍ಕುಮಾರ್ ಅವರ ಪತ್ನಿ ಅಶ್ವಿನಿ ಪುನಿತ್ ರಾಜ್‍ಕುಮಾರ್, ಹಿರಿಯ ಸೋದರ ರಾಘವೇಂದ್ರ ರಾಜ್‍ಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, […]

ಲಾಲ್‍ಬಾಗ್‍ ಫಲಪುಷ್ಪ ಪ್ರದರ್ಶನ: ಡಾ.ರಾಜ್-ಪುನೀತ್‍ಗೆ ಸಮರ್ಪಣೆ

ಬೆಂಗಳೂರು,ಆ.3- ಲಾಲ್‍ಬಾಗ್‍ನಲ್ಲಿ 1912 ರಿಂದ ನಡೆಸಲಾಗುತ್ತಿರುವ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಕರ್ನಾಟಕ ರತ್ನ ಡಾ. ರಾಜ್‍ಕುಮಾರ್ ಮತ್ತು ಡಾ. ಪುನೀತ್ ರಾಜ್‍ಕುಮಾರ್ ಥೀಮ್‍ನೊಂದಿಗೆ ಆಯೋಜಿಸುತ್ತಿರುವುದು ವಿಶೇಷ ಎಂದು ತೋಟಗಾರಿಕಾ ಸಚಿವ ಮುನಿರತ್ನ ತಿಳಿಸಿದರು. ಆ.5ರಿಂದ ಪ್ರಾರಂಭವಾಗಿ ಈ ಫಲಪುಷ್ಪ ಪ್ರದರ್ಶನ 15 ರಂದು ಮುಕ್ತಾಯಗೊಳ್ಳಲಿದೆ. ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಲಾಲ್‍ಬಾಗ್‍ನ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಉದಯ್ ಬಿ.ಗರುಡಾಚಾರ್ ವಹಿಸಲಿದ್ದಾರೆ, ಖ್ಯಾತ […]

ಅಪ್ಪು ಹೆಸರಲ್ಲಿ ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ

ಬೆಂಗಳೂರು,ಜು.12- ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶ್ವ ವಿಖ್ಯಾತ ಲಾಲ್‍ಬಾಗ್‍ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಪವರ್ ಸ್ಟಾರ್ ಪುನೀತ್‍ರಾಜ್ ಕುಮಾರ್ ಹೆಸರಿನಲ್ಲಿ ಈ ಬಾರಿ ಪ್ರದರ್ಶನ ಆಯೋಜಿಸಲಾಗುವುದು ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಲ್‍ಬಾಗ್‍ನಲ್ಲಿ ಪುನೀತ್‍ರಾಜ್‍ಕುಮಾರ್ ಅವರ ಗಾಜನೂರಿನ ಮನೆಯ ಮಾದರಿ ವಿಶೇಷ ಆಕರ್ಷಣೆಯಾಗಲಿದೆ ಎಂದರು. ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಕೋವಿಡ್ ಮಾರ್ಗಸೂಚಿ ಹಾಗೂ ನಿಯಮಗಳ ಪಾಲನೆಯೊಂದಿಗೆ ಪ್ರದರ್ಶನ ನಡೆಯಲಿದ್ದು, ಆ.15ರ ನಂತರವೂ ವೀಕ್ಷಕರ ಬೇಡಿಕೆಗೆ […]