ಕಾಂಗ್ರೆಸ್ ಉಚಿತ ಉಡುಗೊರೆ ಅಸ್ತ್ರಕ್ಕೆ ಬಿಜೆಪಿ ಮೀಸಲಾತಿ ಬ್ರಹ್ಮಾಸ್ತ್ರ

ಬೆಂಗಳೂರು,ಮಾ.25- ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ ಚುನಾವಣೆ ಪ್ರಣಾಳಿಕೆಯ ಗ್ಯಾರಂಟಿ ಉಚಿತ ಯೋಜನೆಗಳ ಅಸ್ತ್ರಕ್ಕೆ ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಗಿಫ್ಟ್ ಬ್ರಹ್ಮಾಸ್ತ್ರವನ್ನು ಪ್ರಯೋಗ ಮಾಡಿ ಮತದಾರರನ್ನು ಕಮಲದತ್ತ ಸೆಳೆಯುವ ಕಸರತ್ತು ನಡೆಸಿದೆ. ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆ ಘೋಷಣೆ ಆಗುವ ಮುನ್ನವೇ ಚುನಾವಣೆ ಪೂರ್ವ ಪ್ರಚಾರಗಳು ಮತ್ತು ಸಮಾವೇಶಗಳಲ್ಲಿ ಹಲವಾರು ಉಚಿತ ಕೊಡುಗೆಗಳ ಚುನಾವಣೆ ಆಶ್ವಾಸನೆಗಳನ್ನು ಘೋಷಣೆ ಮಾಡಿದೆ.ಕಾಂಗ್ರೆಸ್ ಪಕ್ಷದ ನೇತಾರರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಮೂಲಕ ಚುನಾವಣೆ ಪ್ರಣಾಳಿಕೆಯ ಘೋಷಣೆಗಳನ್ನು […]
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕುಕ್ಕರ್ ಭಾಗ್ಯ

ಬೆಂಗಳೂರು,ಜ.31- ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕಾರಣಿಗಳು ಮತದಾರರ ಓಲೈಕೆಗೆ ನಡೆಸುತ್ತಿರುವ ಕಸರತ್ತುಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಹೆಬ್ಬಾಳ ಶಾಸಕ ಭೈರತಿ ಸುರೇಶ್ ಮತದಾರರಿಗೆ ಟಿವಿ ಭಾಗ್ಯ ನೀಡಿರುವ ಬೆನ್ನಲ್ಲೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಹಿರಂಗವಾಗಿಯೇ ಮತದಾರರಿಗೆ ಕುಕ್ಕರ್ ಭಾಗ್ಯ ಕರುಣಿಸಿ ಮತ ಸೆಳೆಯಲು ಮುಂದಾಗಿದ್ದಾರೆ. ಬಿಜೆಪಿ ಶಾಸಕರಾಗಿದ್ದರೂ ಪಕ್ಷದಿಂದ ಸ್ವಲ್ಪ ಅಂತರ ಕಾಯ್ದುಕೊಂಡೆ ಬಂದಿರುವ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಅವರು ಮುಂಬರುವ ಚುನಾವಣೆಯಲ್ಲಿ ಮತ್ತೆ ಗೆದ್ದುಬಂದು ಶಾಸಕರಾಗುವ ಹೆಬ್ಬಯಕೆಯಿಂದ ಕ್ಷೇತ್ರದ ಮತದಾರರಿಗೆ ಕುಕ್ಕರ್ […]
ಮತದಾರರಿಗೆ ತೀರ್ಥಯಾತ್ರೆ, ಪ್ರವಾಸ, ಭರ್ಜರಿ ಉಡುಗೊರೆಗಳ ಭಾಗ್ಯ

ಬೆಂಗಳೂರು,ನ.25-ರಾಜ್ಯ ವಿಧಾನಸಭೆಗೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಂತೆ ಮತದಾರರ ಮೂಗಿಗೆ ತುಪ್ಪ ಸವರಲು ಆಕಾಂಕ್ಷಿಗಳು ನಾನಾ ರೀತಿಯ ಆಮಿಷಗಳನ್ನೊಡುತ್ತಿದ್ದಾರೆ. ಹಾಲಿ ಸಚಿವರು, ಶಾಸಕರು ಹಾಗೂ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ಖಾತ್ರಿಯಲ್ಲಿರುವ ಆಕಾಂಕ್ಷಿಗಳು ಮತದಾರರಿಗೆ ಉಚಿತವಾಗಿ ಉಡುಗೊರೆ ತೀರ್ಥಯಾತ್ರೆ, ಪ್ರವಾಸ, ಕ್ರೀಡಾಕೂಟಗಳ ಆಯೋಜನೆ, ರಸಮಂಜರಿ ಕಾರ್ಯಕ್ರಮ, ಹಬ್ಬಹರಿದಿನಗಳಲ್ಲಿ ಯಥೇಚ್ಚವಾಗಿ ಹಣ ನೀಡುವುದು ಸೇರಿದಂತೆ ನಾನಾ ರೀತಿಯ ಭರವಸೆಗಳನ್ನು ನೀಡುತ್ತಿದ್ದಾರೆ. ಇನ್ನೇನು ಚುನಾವಣೆ ಸಮೀಪಿಸುತ್ತಿರುವುದರಿಂದ ಬಹುತೇಕ 224 ಕ್ಷೇತ್ರಗಳಲ್ಲಿ ಮತದಾರರಿಗೆ ಆಮಿಷವೊಡ್ಡುವ ದೃಶ್ಯಗಳು ಸರ್ವೇ ಸಾಮಾನ್ಯವಾಗಿದ್ದು, […]
ಪತ್ರಕರ್ತರಿಗೆ ಆಮಿಷವೊಡ್ಡುವ ಕೆಲಸ ಮಾಡಿಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು,ಅ.30- ನಾನು ಯಾವುದೇ ಪತ್ರಕರ್ತರಿಗೆ ಉಡುಗೊರೆ ಅಥವಾ ಬೇರೆ ಅಮಿಷವೊಡ್ಡುವ ಕೆಲಸ ಮಾಡಿಲ್ಲ. ಕಾಂಗ್ರೆಸ್ ಟೂಲ್ಕಿಟ್ ಸುಳ್ಳು ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರಿಗೆ ಯಾವುದೇ ರೀತಿಯ ಆಸೆ, ಆಮಿಷವೊಡ್ಡುವ ಕೆಲಸ ಮಾಡಿಲ್ಲ. ಅಥವಾ ನನ್ನ ಕಚೇರಿಯಿಂದಲೂ ಸೂಚನೆ ಕೊಟ್ಟಿಲ್ಲ. ಪ್ರತಿಪಕ್ಷ ಕಾಂಗ್ರೆಸ್ನವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್ ಅಧಿಕಾರದಲ್ಲಿದ್ದ ವೇಳೆ ಐಫೋನ್, ಲ್ಯಾಪ್ ಟ್ಯಾಪ್, ಬಂಗಾರದ ನಾಣ್ಯಗಳನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅವರಿಗೆ ನಮ್ಮ […]