ಹರ್ ಘರ್ ತಿರಂಗ ಅಭಿಯಾನ, ಬೆಂಗಳೂರಿನಲ್ಲಿ 2 ಲಕ್ಷ ಧ್ವಜ ವಿತರಣೆ

ಬೆಂಗಳೂರು, ಜು.25- ಸ್ವಾತಂತ್ರ್ಯ ಅಮೃತ ಮಹೋತ್ಸ ವದ ಅಂಗವಾಗಿ ಆಗಸ್ಟ್ 11 ರಿಂದ 17ರವರೆಗೆ ದೇಶದ ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗ ಎಂಬ ಘೋಷವಾಕ್ಯದಡಿ ದೇಶಭಕ್ತಿ ಬಿಂಬಿಸಲು ನಡೆಯುವ ಅಭಿಯಾನದಲ್ಲಿ ಬೆಂಗಳೂರಿನಲ್ಲಿ ಧ್ವಜಗಳನ್ನು ಹಾರಿಸಲು ವಲಯವಾರು ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಖತಿ ಇಲಾಖೆಯ ನಿರ್ದೇಶಕರು ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಉನ್ನತ ಮಟ್ಟದ ಸಮಿತಿ ಎರಡು ಲಕ್ಷ ಧ್ವಜಗಳನ್ನು ಬೆಂಗಳೂರು ಮಹಾ ನಗರ ಪಾಲಿಕೆಗೆ ವಿತರಿಸಿದ್ದು, ಅವುಗಳನ್ನು […]

ಆ.11ರಿಂದ ‘ಹರ್ ಘರ್ ತಿರಂಗ’ ಅಭಿಯಾನ

ಬೆಂಗಳೂರು,ಜು.13- ದೇಶವು 75ನೇ ಅಜಾದಿ ಕಾ ಅಮೃತ್ ಮಹೋತ್ಸವ ಅಚರಣೆ ಮಾಡುತ್ತಿರುವ ಹಿನ್ನಲೆಯಲ್ಲಿ ದೇಶ ಭಕ್ತಿ ಬಿಂಬಿಸುವ ಹರ್ ಘರ್ ತಿರಂಗ ಅಭಿಯಾನವನ್ನು ಆ.11ರಿಂದ 17ರವರೆಗೆ ರಾಜ್ಯಾದ್ಯಂತ ನಡೆಸಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದ್ದು, ಅನೇಕರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು, ಇದರ ಸ್ಮರಣಾರ್ಥವಾಗಿ ಆ.11ರಿಂದ 17ರವರೆಗೆ ಪ್ರತಿ ಮನೆ ಮನೆಯಲ್ಲೂ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಳ್ಳಬೇಕೆಂದು ಸೂಚಿಸಲಾಗಿದೆ. […]