ಅನಿತಾಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ

ಬೆಂಗಳೂರು,ಫೆ.22- ಕಾರ್ಯಕ್ರಮಕ್ಕೆ ಕರೆಯದೆ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂಬ ಶಾಸಕಿ ಅನಿತಾಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವರು, ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನೆ ವೇಳೆ ಅನಿತಾ ಕುಮಾರಸ್ವಾಮಿ ಅವರಿಗೆ ಅಪಮಾನಿಸಲಾಗಿದೆ ಎಂಬರ್ಥದ ಮಾತನ್ನು ಕೇಳಿ ಆಶ್ಚರ್ಯವಾಯಿತು. ಕಾರ್ಯಕ್ರಮ ಶಿಷ್ಟಾಚಾರದ ಪ್ರಕಾರವೇ ಜರುಗಿದರೂ ನಿಗದಿತ ಸಮಯಕ್ಕೆ ಹಾಜರಾಗದೇ, ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ […]

ನೂತನ ತಾಲೂಕಾಗಿ ಹಾರೋಹಳ್ಳಿ ಉದ್ಘಾಟನೆ

ಹಾರೋಹಳ್ಳಿ, ಫೆ.21- ರಾಮನಗರ ಜಿಲ್ಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಹಾರೋಹಳ್ಳಿ ತಾಲ್ಲೂಕಿನ ನೂತನ ತಾಲ್ಲೂಕು ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೂತನ ತಾಲ್ಲೂಕು ಒಟ್ಟು 11 ಗ್ರಾಮ ಪಂಚಾಯತಿಗಳನ್ನು ಒಳಗೊಂಡಿದ್ದು, 82 ಗ್ರಾಮಗಳಿವೆ. ಹೊಸ ತಾಲ್ಲೂಕಿನ ಜನಸಂಖ್ಯೆಯು 90 ಸಾವಿರ ಆಗಿದೆ ಎಂದು ತಿಳಿಸಿದರು.ತಾಲ್ಲೂಕು ಕಚೇರಿಗೆ ಬೇಕಾದ ಹುದ್ದೆಗಳನ್ನು ಬಿಜೆಪಿ ಸರಕಾರ ಸೃಜಿಸಿದ್ದು, ಎಲ್ಲ ಕಚೇರಿಗಳಿಗೂ ಜಾಗ ಒದಗಿಸಿದೆ. ಅಗತ್ಯವಿದ್ದರೆ ಕಚೇರಿಗಳ ಕಟ್ಟಡ ನಿರ್ಮಿಸಲು 30 ಗುಂಟೆ ಜಮೀನನ್ನು […]