ಹಿಮಪಾತದಲ್ಲಿ ಸಿಲುಕಿದ್ದ 1000 ಪ್ರವಾಸಿಗರನ್ನು ರಕ್ಷಿಸಿದ ಭಾರತೀಯ ಸೇನೆ

ಗ್ಯಾಂಗ್ಟಾಕ್, ಮಾ 17- ಭಾರೀ ಹಿಮಪಾತದಿಂದ ಪೂರ್ವ ಸಿಕ್ಕಿಂನ ಚಂಗು ಪ್ರದೇಶದಲ್ಲಿ ಸಿಲುಕಿದ್ದ ಮಹಿಳೆಯರುಮತ್ತು ಮಕ್ಕಳು ಸೇರಿದಂತೆ 1,000 ಕ್ಕೂ ಹೆಚ್ಚು ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ. ನತು ಲಾ, ತ್ಸೋಮ್ಗೊ (ಚಾಂಗು) ಸರೋವರ ಮತ್ತು ಪಕ್ಕದ ಪ್ರದೇಶಗಳಲ್ಲಿ ತೀವ್ರವಾದ ಹಿಮಪಾತ ಉಂಟಾಗಿ ತಾಪಮಾನ ಶೂನ್ಯ ಮಟ್ಟಕ್ಕೆ ಇಳಿಸಿತು ಮತ್ತು ಪ್ರಯಾಣಿಕರ ವಾಹನಗಳು ನಿಂತುಹೋಗಿ ಭಾರಿ ಆತಂಕ ನಿರ್ಮಾಣವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟದ ಕಲ್ಲೆಂದು ನಂಬಿಸಿ ಸಾರ್ವಜನಿಕರಿಗೆ ವಂಚನೆ : ಇಬ್ಬರು ಸಿಸಿಬಿ ಬಲೆಗೆ ಎಲ್ಲಾ […]
ಬೆಂಗಳೂರು ಸೇರಿ ರಾಜ್ಯದಾದ್ಯಂತ ಇನ್ನೂ 2 ದಿನ ಜಿಟಿಜಿಟಿ ಮಳೆ

ಬೆಂಗಳೂರು,ನ.24-ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜಿಟಿ ಜಿಟ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ನಿನ್ನೆ ಹಲವೆಡೆ ಮಧ್ಯಾಹ್ನದಿಂದಲೇ ತುಂತುರು ಮಳೆಯಾಗುತ್ತಿದೆ. ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಕೆಲವೆಡೆ ತುಂತುರು ಮಳೆ ಆರಂಭವಾಗಿತ್ತು. ನಿನ್ನೆ ಮಧ್ಯಾಹ್ನ ನಂತರ ಆಗಾಗ್ಗೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇಂದೂ ಕೂಡು ಮಳೆ ಮುಂದುವರೆದಿದ್ದು, ದೈನಂದಿನ […]
ಬೆಂಗಳೂರಲ್ಲಿ ಮಳೆ, ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯಕ್ಕೆ CM ಸೂಚನೆ

ಬೆಂಗಳೂರು,ಅ.20- ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವು ಕಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ಸಮರೋಪಾದಿಯಲ್ಲಿ ಕಾರ್ಯಾಚರಣೆನಡೆಸಬೇಕೆಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. 36 ಸಾವಿರ ವಿದ್ಯಾರ್ಥಿಗಳಿಗೆ ಸ್ಕೂಟರ್ ಗಿಫ್ಟ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರಂತರ ಮಳೆಯಿಂದಾಗಿ ಈ ರೀತಿ ಸಮಸ್ಯೆಗಳು ಉದ್ಭವಿಸುತ್ತಲೇ ಇವೆ. ಕಳೆದ ರಾತ್ರಿ ಮತ್ತೆ ದಾಖಲೆ ಪ್ರಮಾಣದಲ್ಲಿ ಮಳೆ ಬಂದಿದೆ. ತಕ್ಷಣವೇ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಸೂಚಿಸಿರುವುದಾಗಿ […]
ಇನ್ನೂ ಒಂದು ವಾರ ಭಾರೀ ಮಳೆ..!

ಬೆಂಗಳೂರು,ಅ.16- ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಕೊಡುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೆಚ್ಚು ಕಡಿಮೆ ಇನ್ನು ಒಂದು ವಾರ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.ರಾಜ್ಯದ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾಗಿದ್ದರೆ ಮತ್ತೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ರಾಮನಗರ, ಮಂಡ್ಯ, ಬೆಂಗಳೂರುನಗರ, ಚಿತ್ರದುರ್ಗ, ಮೈಸೂರು, ದಕ್ಷಿಣ ಕನ್ನಡ, ವಿಜಯಪುರ, ಚಾಮರಾಜನಗರ, ಬೆಳಗಾವಿ ಜಿಲ್ಲೆಗಳ ಹಲವು ಭಾಗಗಳಲ್ಲಿ ವ್ಯಾಪಕ ಹಾಗೂ ಭಾರೀ ಪ್ರಮಾಣದ ಮಳೆಯಾದ ವರದಿಯಾಗಿದೆ.ಉಳಿದಂತೆ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿರುವ ವರದಿಯಾಗಿದೆ. ಮೇಲ್ಮೈ ಸುಳಿ […]
ಅಬ್ಬರದ ಮಳೆಗೆ ಬೆಚ್ಚಿಬಿದ್ದ ಬೆಂಗಳೂರು

ಬೆಂಗಳೂರು,ಅ.15- ನಿನ್ನೆ ನಗರದಲ್ಲಿ ಸುರಿದ ಮಳೆ 92 ವಾರ್ಡ್ಗಳಲ್ಲಿ ದಾಖಲೆ ನಿರ್ಮಿಸಿದೆ. ಕಳೆದ ಕೆಲವು ದಿನಗಳ ಹಿಂದೆ ಸುರಿದಿದ್ದ ರಣಮಳೆಗೆ ಮಹದೇವಪುರ, ಕೆ.ಆರ್.ಪುರಂನ ಕೆಲ ಪ್ರದೇಶಗಳಲ್ಲಿ ಭಾರಿ ಅನಾಹುತಗಳು ಸಂಭವಿಸಿದ್ದವು. ಹೀಗಾಗಿ ಬೆಂಗಳೂರಿಗರಿಗೆ ಮಳೆ ಅಂದರೆ ಬೆಚ್ಚಿ ಬೀಳುವಂತಾಗಿದೆ. ಇದರ ಮಧ್ಯೆ ಮತ್ತೆ ನಗರದಲ್ಲಿ ಮಳೆಯಾಗುತ್ತಿರುವುದರಿಂದ ಸ್ಥಳೀಯರು ಮುಂದೆ ಏನು ಕಾದಿದೆಯೋ ಎಂದು ಚಿಂತಾ ಕ್ರಾಂತರಾಗಿದ್ದಾರೆ. ನಿನ್ನೆ ಒಂದೇ ದಿನಕ್ಕೆ ಬೆಂಗಳೂರಿನ 8 ವಲಯಗಳ 92 ವಾರ್ಡ್ಗಳಲ್ಲಿ ವರುಣನ ಆರ್ಭಟ ಅತಿ ಹೆಚ್ಚಾಗಿತ್ತು. ಯಲಹಂಕ 75.5 ಮಿ.ಮೀ, […]
ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ

ಬೆಂಗಳೂರು, ಅ.15- ರಾಜ್ಯದಲ್ಲಿ ವರುಣ ಮತ್ತೆ ಆರ್ಭಟಿಸುತ್ತಿದ್ದು, ವಿವಿಧೆಡೆ ಭಾರೀ ಅನಾಹುತಗಳನ್ನೇ ಸೃಷ್ಟಿಸಿದೆ.ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ದಾವಣಗೆರೆ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದರೆ, ಕೆರೆಗಳು ಎರಡು ಹಾಗೂ ಮೂರನೆ ಬಾರಿ ಕೋಡಿ ಹರಿಯುತ್ತಿವೆ. ಮಂಡ್ಯ: ಮಳವಳ್ಳಿ ತಾಲೂಕಿನ ಮಾರ್ಕಾಲು ಕೆರೆ ಕೋಡಿ ಒಡೆದು ಅಪಾರ ಪ್ರಮಾಣದ ನೀರು ಜಮೀನುಗಳಿಗೆ ನುಗ್ಗಿದ ಪರಿಣಾಮ ಕೈಗೆ ಬಂದ […]
ರಾಜ್ಯದಲ್ಲಿ ಮತ್ತೆ ಮಳೆ
ಬೆಂಗಳೂರು,ಅ.3- ಬಂಗಾಳಕೊಲ್ಲಿ ಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿ ಗಾಳಿಯಿಂದಾಗಿ ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ನಿನ್ನೆಯಿಂದ ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಇಂದು ಮತ್ತು ನಾಳೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮುಂಗಾರು ಮರಳುವಿಕೆ ಹಾಗೂ ಹಿಂಗಾರು ಆರಂಭವಾಗುವ ಪರ್ವ ಕಾಲ ಇದಾಗಿದ್ದು, ಚದುರಿದಂತೆ ರಾಜ್ಯದ ಒಳನಾಡಿನಲ್ಲಿ ಮಳೆಯಾಗಲಿದೆ. ಆದರೆ ವ್ಯಾಪಕ ಪ್ರಮಾಣದಲ್ಲಿ ಭಾರೀ ಮಳೆಯಾಗುವ ಲಕ್ಷಣಗಳು […]
ಪೀಣ್ಯ ಎಲಿವೇಟೆಡ್ ಕಾಮಗಾರಿ 3 ತಿಂಗಳಲ್ಲಿ ಪೂರ್ಣ
ಬೆಂಗಳೂರು,ಸೆ.20- ಬೆಂಗಳೂರು-ಮುಂಬೈ ಸಂಪರ್ಕಿಸುವ ಪೀಣ್ಯ ಎಲಿವೆಟೆಡ್ ಕಾಮಾಗಾರಿ ಡಿಸೆಂಬರ್ ತಿಂಗಳಿಗೆ ಪೂರ್ಣಗೊಳ್ಳಲಿದ್ದು ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಳೆದ ವಾರ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಬಂದಾಗ ನಾನು ಈ ವಿಷಯವನ್ನು ಪ್ರಸ್ತಾಪಿಸಿ ತುರ್ತಾಗಿ ಈ ಕಾಮಗಾರಿಯನ್ನು ಮುಗಿಸಿಕೊಡಲು ಮನವಿ ಮಾಡಿದ್ದೆ. ಫ್ಲೈಓವರ್ ಮೇಲೆ ನಡೆಸಲು ಉದ್ದೇಶಿಸಿರುವ ಕಾಮಗಾರಿಗಳ ಪ್ರಸ್ತಾವನೆಯನ್ನು ಸಿದ್ದಪಡಿಸಿ ನಮ್ಮ ಇಲಾಖೆಗೆ ಸಲ್ಲಿಸಿದರೆ ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ. ಈಗಾಗಲೇ ಅಧಿಕಾರಿಗಳು ಪತ್ರ […]
ಶಾಂಘೈಗೆ ಅಪ್ಪಳಿಸಿದ ಚಂಡಮಾರುತ, ಭಾರಿ ಅವಾಂತರ ಸೃಷ್ಟಿ
ಬೀಜಿಂಗ್, ಸೆ 15 (ಎಪಿ) ಶಾಂಘೈಗೆ ಅಪ್ಪಳಿದ ಚಂಡಮಾರುತ ಭಾರಿ ಅವಾಂತರ ಸೃಷ್ಟಿಸಿದ್ದು ಹಲವಡೆ ರಸ್ತೆ,ವಾಹನ ಹಾಳಾಗಿದೆ ಶಾಂಘೈನ ದಕ್ಷಿಣದ ನಿಂಗ್ಬೋ ನಗರದಲ್ಲಿ ರಾತ್ರಿಯಿಡೀ ಭಾರಿ ಮಳೆಯ ಕಾರಣ ರಸ್ತೆಗಳಲ್ಲಿ ನೀರು ಪ್ರವಾಹದ ರೀತಿ ಹರಿದು ಕೆಲ ಸ್ಕೂಟರ್ ಮತ್ತು ಕಾರುಗಳು ನೀರಿನಲ್ಲಿ ಮುಳುಗಿವೆ ಕೆಲವು ಕೊಚ್ಚಿಹೋಗಿದೆ. ವಸತಿ ಸಂಕೀರ್ಣವು ನೀರಿನಿಂದ ಆವೃತವಾಗಿದ್ದು ಹಲವು ಕಡೆ ರಸ್ತೆಗಲನ್ನು ಮುಚ್ಚಲಾಗಿದೆ.ಪರಿಹಾರ ಕಾರ್ಯ ಆರಂಭವಾಗಿದೆ. ಇದನ್ನೂ ಓದಿ : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-09-2022) ಗಂಟೆಗೆ 125 ಕಿಲೋಮೀಟರ್ […]
ಅತಿವೃಷ್ಟಿ, ಪ್ರವಾಹ ಕುರಿತ ಚರ್ಚೆಗೆ 3 ದಿನ ಅವಕಾಶ : ಸಭಾಧ್ಯಕ್ಷ ಕಾಗೇರಿ
ಬೆಂಗಳೂರು,ಸೆ.13-ಅತಿವೃಷ್ಟಿ, ಪ್ರವಾಹಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮೂರು ದಿನಗಳ ಕಾಲ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆಯಲ್ಲಿ ತಿಳಿಸಿದರು.ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿಲುವಳಿ ಸೂಚನೆಯನ್ನು ನಿಯಮ 69ಕ್ಕೆ ಮಾರ್ಪಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಲಾಗಿದೆ. ವಿಷಯದ ಮಹತ್ವ ಅರಿತು ಈ ರೀತಿ ಮಾಡಲಾಗಿದೆ. ಸದಸ್ಯರ ಹಕ್ಕನ್ನು ಮೊಟಕುಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಮಾತನಾಡಿ, ಮಹತ್ವದ ಹಾಗೂ ಜರೂರಾದ ವಿಷಯವಾಗಿದ್ದರಿಂದ ನಿಲುವಳಿ ಸೂಚನೆಗೆ ಅವಕಾಶ ಕೋರಲಾಗಿತ್ತು. ಪೂರ್ವಭಾವಿ ವಿಷಯ ಪ್ರಸ್ತಾಪಕ್ಕೂ ಅವಕಾಶ ಮಾಡಿಕೊಡಲಾಗಿದೆ. […]