ಅಮರನಾಥಗೌಡ ಹಾಗೂ ದ್ವಾರಕೀಶ್ಗೆ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು,ಡಿ.5- ಅಮೆರಿಕ ಕನ್ನಡ ಸಂಘಟನೆಗಳ ಒಕ್ಕೂಟ(ಅಕ್ಕ)ದ ಸಂಸ್ಥಾಪಕ ಅಧ್ಯಕ್ಷರಾದ ಅಮರನಾಥಗೌಡ, ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಬಂಗ್ಲೆ ಶಾಮರಾವ್ ದ್ವಾರಕನಾಥ್ (ದ್ವಾರಕೀಶ್), ಚಿತ್ರಕಲಾವಿದ ಡಾ.ಕುಮಾರ್ ಸೇರಿದಂತೆ ಹಲವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ವಿಶ್ವವಿದ್ಯಾನಿಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿ, ವಿವಿಗಳ ಕುಲಾಪತಿಗಳಾಗಿರುವ ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ.ಎಸ್.ಎಂ.ಜಯಕರ ಸೇರಿದಂತೆ […]
ಅಮರನಾಥಗೌಡ ಹಾಗೂ ದ್ವಾರಕೀಶ್ಗೆ ನಾಳೆ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು, ಡಿ.4- ನಾಳೆ ನಡೆಯಲಿರುವ ಬೆಂಗಳೂರು ವಿಶ್ವವಿದ್ಯಾಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅನಿವಾಸಿ ಭಾರತೀಯ ಹಾಗೂ ಅಮೆರಿಕಾ ಕನ್ನಡ ಸಂಘಟನೆಗಳ ಒಕ್ಕೂಟ(ಅಕ್ಕ)ದ ಸಂಸ್ಥಾಪಕ ಅಧ್ಯಕ್ಷರಾದ ಅಮರನಾಥಗೌಡರು, ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ದ್ವಾರಕೀಶ್, ಚಿತ್ರಕಲಾವಿದ ಡಾ. ಟಿ.ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗತ್ತದೆ. ಕನ್ನಡ ಚಲನಚಿತ್ರೋದ್ಯಮಕ್ಕೆ ನೀಡಿದ ಕೊಡುಗೆಗೆ ದ್ವಾರಕೀಶ್ ಅವರಿಗೆ, ಕಾನೂನು ಮತ್ತು ಸಮುದಾಯ ಸೇವಾ ಕ್ಷೇತ್ರದಲ್ಲಿ ಕೊಡುಗೆಯನ್ನು ನೀಡಿರುವ ಅಮೆರಿಕಾದ ಕಾನೂನು ಸಂಸ್ಥೆಯ ಸಂಸ್ಥಾಪನಾ […]
ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್
ಬೆಂಗಳೂರು.ಸೆ.13- ಖ್ಯಾತ ನಟ ರಮೇಶ್ ಅರವಿಂದ್, ವಿ.ರವಿಚಂದನ್ ಸೇರಿ ಮೂವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಲಾಗಿದೆ. ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದನ್ ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಪ್ರೊ. ರಾಮಚಂದ್ರೆಗೌಡ ತಿಳಿಸಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ […]