ಚಂದ್ರಶೇಖರ್ ಸಾವಿನ ಪ್ರಕರಣ : ವಿನಯ್ ಗುರೂಜಿ ಬಳಿ ಮಾಹಿತಿ ಕಲೆಹಾಕಿದ ಪೊಲೀಸರು

ಬೆಂಗಳೂರು,ನ.7- ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸೋದರ ಮಗನ ನಿಗೂಢ ಸಾವು ಕುರಿತು ತನಿಖಾ ತಂಡ ವಿನಯ್ ಗುರೂಜಿ ಅವರಿಂದ ಮಾಹಿತಿ ಪಡೆದಿದೆ. ಚಿಕ್ಕಮಗಳೂರಿನ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಅವರ ಮಠಕ್ಕೆ ತಡರಾತ್ರಿ ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಆಗಮಿಸಿದ ತನಿಖಾ ತಂಡ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಗುರೂಜಿ ಅವರಿಂದ ಕೆಲವು ಮಾಹಿತಿಯನ್ನು ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಆಶ್ರಮದ ಸಿಬ್ಬಂದಿ, ಆಶ್ರಮದ ಉಸ್ತುವಾರಿ ವಹಿಸಿರುವ ಭಕ್ತರಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಚಂದ್ರು ಯಾವ ವಿಚಾರವನ್ನು ನಿಮ್ಮ ಜೊತೆ ಮಾತನಾಡಿದರು. ಭೇಟಿ […]