ನಕಲಿ ಪೊಲೀಸರಿಂದ 2 ಕೆಜಿ ಚಿನ್ನಾಭರಣ ದರೋಡೆ

ಬೆಂಗಳೂರು, ಮಾ.13- ಚಿನ್ನಾಭರಣ ಖರೀದಿಗಾಗಿ ರಾಯಚೂರಿನಿಂದ ನಗರಕ್ಕೆ ಬಂದಿದ್ದ ಇಬ್ಬರನ್ನು ಅಡ್ಡಗಟ್ಟಿದ ಖದೀಮರು ತಾವು ಪೊಲೀಸರೆಂದು ಹೇಳಿ ತಪಾಸಣೆ ನೆಪದಲ್ಲಿ ಅವರ ಬಳಿ ಇದ್ದ 19 ಸಾವಿರ ನಗದೂ ಸೇರಿದಂತೆ 1.12 ಕೋಟಿ ಮೌಲ್ಯದ 2 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಹಾಗೂ ಚಿನ್ನಾಭರಣಗಳನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಯಚೂರಿನ ನೇತಾಜಿ ನಗರದ ಶರಫ್ ಬಜಾರ್ನ ಅಬ್ದುಲ್ ರಜಾಕ್ ಹಾಗೂ ಮಲ್ಲಯ್ಯ ಎಂಬುವರು ಚಿನ್ನ ಕಳೆದುಕೊಂಡವರು. ರಾಯಚೂರಿನ […]
ಮನೆಗಳ್ಳನ ಬಂಧನ : 18 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ವಶ

ಬೆಂಗಳೂರು, ಫೆ.9- ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ 18 ಲಕ್ಷ ಮೌಲ್ಯದ 300 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ ರಮೇಶ(53) ಬಂಧಿತ ಆರೋಪಿ. ಈತನಿಂದ 300 ಗ್ರಾಂ ತೂಕದ ವಿವಿಧ ಚಿನ್ನದ ವಡವೆಗಳು ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕಾಶ್ ಎಂಬುವವರ ಮನೆ ಇದೆ. ಫೆ.5ರಂದು ಬೆಳಗ್ಗೆ 8.30ರಿಂದ ರಾತ್ರಿ 9.20ರ ನಡುವಿನ ಸಮಯದಲ್ಲಿ […]
ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಬೆಂಗಳೂರು, ನ.30- ಆಟೋದಲ್ಲಿ ಮರೆತು ಬಿಟ್ಟು ಹೋಗಿದ್ದ 250 ಗ್ರಾಂ ತೂಕದ ಚಿನ್ನಾಭರಣವನ್ನು ಗೋವಿಂದ ರಾಜನಗರ ಠಾಣೆ ಪೊಲೀಸರು ಪತ್ತೆ ಹಚ್ಚಿ ವಾಸುದಾರರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರ ಕಾರ್ಯ ಹಾಗೂ ಆಟೋ ಚಾಲಕನ ಪ್ರಮಾಣಿಕತೆಗೆ ದಂಪತಿ ಧನ್ಯವಾದ ತಿಳಿಸಿದ್ದಾರೆ. ಹೌಸಿಂಗ್ ಬೋರ್ಡ್ ನಿವಾಸಿ ಮಂಜುನಾಥ್ ಕುಟುಂಬ ಸಂಬಂಧಿಕರ ಮದುವೆಗಾಗಿ ತಮಿಳುನಾಡಿಗೆ ಹೋಗಿದ್ದರು. ವಾಪಸ್ ಮೊನ್ನೆ ರಾತ್ರಿ ಬೆಂಗಳೂರಿಗೆ ಬಂದಿದ್ದು, ಆಟೋದಲ್ಲಿ ಮನೆ ಬಳಿ ಬಂದ ಸಂದರ್ಭದಲ್ಲಿ 250 ಗ್ರಾಂ ಚಿನ್ನಾಭರಣವಿದ್ದ ಬ್ಯಾಗನ್ನು ಮರೆತು ಆಟೋದಲ್ಲೇ ಬಿಟ್ಟು ಇಳಿದಿದ್ದಾರೆ. ತಕ್ಷಣ […]
ನಾಲ್ವರ ಬಂಧನ : 15.53ಲಕ್ಷ ಮೌಲ್ಯದ ಚಿನ್ನಾಭರಣ, ವಾಹನಗಳ ವಶ

ಬೆಂಗಳೂರು, ನ.25- ಹಗಲು ಮತ್ತು ರಾತ್ರಿ ವೇಳೆ ಕನ್ನಗಳವು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಉತ್ತರ ವಿಭಾಗದ ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ 15.53 ಲಕ್ಷ ರೂ. ಮೌಲ್ಯದ 261 ಗ್ರಾಂ ಚಿನ್ನಾಭರಣ 500 ಗ್ರಾಂ ಬೆಳ್ಳಿ ಸಾಮಾನುಗಳು, 7 ಸಾವಿರ ಹಣ ಹಾಗೂ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕನ್ನಗಳ್ಳರ ಸೆರೆ:ನಂದಿನಿ ಲೇಔಟ್ ರೈಲ್ವೆ ಮೈನ್ಸ್ ಕಾಲೋನಿಯಲ್ಲಿ ವಾಸವಿರುವ ಪಿರ್ಯಾದುದಾರರೊಬ್ಬರು ಅಕ್ಟೋಬರ್ 22ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬ […]
ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್ : 15 ಲಕ್ಷ ಮೌಲ್ಯದ ಚಿನ್ನಾಭರಣ, 3 ಕಾರುಗಳ ಜಪ್ತಿ
ಬೆಂಗಳೂರು, ಸೆ.17- ಮನೆಯ ಬೀಗ ಮೀಟಿ ಒಳ ನುಗ್ಗಿ ಚಿನ್ನದ ಆಭರಣಗಳು, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ 3 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಬನ್ನೇರುಘಟ್ಟ ರಸ್ತೆಯ ಬಸವನ ಪುರ ಗ್ರಾಮದ ಮೊಹಮ್ಮದ್ ತೌಹಿದ್ ಅಲಿಯಾಸ್ ತೌಹಿದ್(20) ಬಂಧಿತ ಆರೋಪಿ.ಜೂನ್ 10ರಂದು ರಾತ್ರಿ ಎಂ.ಪಿ.ಎಂ. ಲೇಔಟ್ನ ವಿಶ್ವೇಶ್ವರಯ್ಯ ಲೇಔಟ್ 9ನೇ ಬ್ಲಾಕ್ನ ಮನೆಯೊಂದರ ಮುಂಭಾಗಿಲು ಬೀಗ ಮೀಟಿ ಚಿನ್ನದ […]
ಮನೆ ಕೆಲಸಕ್ಕೆ ಸೇರಿ ಚಿನ್ನಾಭರಣ ದೋಚಿದ್ದ ಮುಂಬೈನ ಮೂವರು ಕಳ್ಳಿಯರು ಸೆರೆ
ಬೆಂಗಳೂರು,ಜು.11-ಫೇಸ್ಬುಕ್ನ ಪಬ್ಲಿಕ್ ಗ್ರೂಪ್ನಲ್ಲಿ ನಕಲಿ ಖಾತೆ ತೆರೆದು ನಕಲಿ ವಿವರಗಳನ್ನು ನೀಡುವ ಮೂಲಕ ಮನೆಕೆಲಸಗಾರರು ಲಭ್ಯವಿದ್ದಾರೆಂಬ ಜಾಹಿರಾತು ನೀಡಿ ನಂತರ ಮನೆಕೆಲಸಕ್ಕೆ ಸೇರಿಕೊಂಡು ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ಮುಂಬೈನ ಮೂವರು ಮಹಿಳೆಯರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಪ್ರಿಯಾಂಕ ರಾಜೇಶ್ ಮೊಗ್ರೆ(29), ಮಹಾದೇವಿ(26) ಮತ್ತು ನವೀಮುಂಬೈನ ವನಿತ(37) ಬಂಧಿತ ಮಹಿಳೆಯರು. ಇವರಿಂದ ಬಂಗಾರದ ಒಡವೆಗಳು ಹಾಗೂ ಬೆಳ್ಳಿ ನಾಣ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ನಿವಾಸಿ ಸುಬ್ಬಲಕ್ಷ್ಮಿ ಎಂದು ಸುಳ್ಳು ವಿವರಗಳನ್ನು ನೀಡಿ ಅರವಿಂದ ಎಂಬುವರ […]