ಮಾನಸಿಕ ಒತ್ತಡದ ಮೂಲಕ ಶಿಕ್ಷಣ ವ್ಯವಸ್ಥೆ ಹಾಳು : ಯು.ಟಿ.ಖಾದರ್ ಆಕ್ರೋಶ

ಬೆಂಗಳೂರು, ಫೆ.20- ಕಾಂಗ್ರೆಸ್ ಸರ್ಕಾರ ಅಕಾರದಲ್ಲಿದ್ದಾಗ ಸೌಹಾರ್ದತೆಗೆ ಧಕ್ಕೆ ಬರುವ ಯಾವ ಘಟನೆಗಳು ನಡೆದಿರಲಿಲ್ಲ. ಬಿಜೆಪಿ ದುರುದ್ದೇಶದಿಂದ ಹಿಜಾಬ್ ವಿವಾದವನ್ನು ಸೃಷ್ಟಿಸಿ, ಮಾನಸಿಕ ಒತ್ತಡದ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತ ಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಹಿಜಾಬ್ ವಿಷಯದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ ಉದ್ದೇಶ ಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ ಎಂದು ಅಸಮದಾನ ವ್ಯಕ್ತ ಪಡಿಸಿದರು. ಹಿಜಾಬ್ […]