ತಿರುಪತಿ-ತಿರುಮಲದಲ್ಲಿ ತಲೆ ಎತ್ತುತ್ತಿದೆ ಸುಸಜ್ಜಿತ ಕರ್ನಾಟಕ ಭವನ
ತಿರುಪತಿ,ಜು.12- ರಾಜ್ಯದಿಂದ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ತಿರುಪತಿ-ತಿರುಮಲದಲ್ಲಿ ರಾಜ್ಯ ಸರ್ಕಾರ ನಿರ್ಮಾಣ ಮಾಡುತ್ತಿರುವ ಸುಸಜ್ಜಿತ ಕರ್ನಾಟಕ ಭವನ ಮುಂದಿನ ಫೆಬ್ರವರಿ ತಿಂಗಳಿನಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಿರಲಿದೆ. ಸುಮಾರು 236 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಗೊಳ್ಳಲಿದ್ದು, ಕಾಮಗಾರಿ ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳುಳ್ಳ ಕರ್ನಾಟಕ ಭವನದಲ್ಲಿ ಒಟ್ಟು 236 ಕೊಠಡಿಗಳು ಇರಲಿದ್ದು, ಇದರಲ್ಲಿ ಅತಿ ಗಣ್ಯರು ( ವಿವಿಐಪಿ), ಗಣ್ಯರು ( ವಿಐಪಿ) ಹಾಗೂ ಜನಸಾಮಾನ್ಯರಿಗೆ ಪ್ರತ್ಯೇಕವಾಗಿ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ. ತಿರುಮಲ – […]
ಶ್ರೀಶೈಲಂನಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ
ಬೆಂಗಳೂರು,ಫೆ.21-ಆಂಧ್ರಪ್ರದೇಶದ ಶ್ರೀ ಕ್ಷೇತ್ರ ಶ್ರೀಶೈಲಂಗೆ ರಾಜ್ಯದಿಂದ ತೆರಳುವ ಭಕ್ತರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ನಿರ್ಮಾಣ ಮಾಡುತ್ತಿರುವ ಕರ್ನಾಟಕ ಭವನಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಸಿಎಂ ಬೊಮ್ಮಾಯಿಗೆ ಮನವಿ ಮಾಡುವುದಾಗಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ವಿಧಾನಸಭೆಯಲ್ಲಿಂದು ತಿಳಿಸಿದರು. ಶಾಸಕ ಬಸವರಾಜ ಮತ್ತಿಮೋಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶ್ರೀಶೈಲಂನ ಶ್ರೀ ಬ್ರಹ್ಮಾರಂಭ ಸ್ವಾಮಿ ದೇವಾಲಯದ ಬಳಿ 300*300 ಅಡಿ ಜಾಗದಲ್ಲಿ ಛತ್ರವನ್ನು ನಿರ್ಮಿಸುತ್ತಿದ್ದೇವೆ. ನೆಲಮಹಡಿ ಮತ್ತು ಮೊದಲ ಮಹಡಿಯಲ್ಲಿ ಒಟ್ಟು 16 ಕೊಠಡಿಗಳು, ನೆಲಮಹಡಿಯಲ್ಲಿ 8 […]