ಕೆಎಸ್ಎಫ್ಸಿಯಿಂದ ಉದ್ದಿಮೆದಾರರಿಗೆ ಪ್ರೋತ್ಸಾಹ
ಬೆಂಗಳೂರು,ಜು.15- ರಾಜ್ಯದಲ್ಲಿ ಕೊರೊನಾ ನಂತರ ಉದ್ಯಮ ಕ್ಷೇತ್ರ ಚೇತರಿಕೆ ಕಂಡಿದ್ದು, ಪ್ರಸ್ತುತ ಕೆಎಸ್ಎಫ್ಸಿ ಕಡಿಮೆ ಬಡ್ಡಿ ದರದಲ್ಲಿ ಉದ್ಯಮಿಗಳಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದು ಪ್ರೋತ್ಸಾಹಿಸುತ್ತಿದೆ ಎಂದು ಸರ್ಕಾರದ ಆರ್ಥಿಕ ಇಲಾಖೆ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಏಕರೂಪ್ ಕೌರ್ ತಿಳಿಸಿದರು. ನಗರದಲ್ಲಿ ಕೆಎಸ್ಎಫ್ಸಿ ಶಾಖಾ ಕಚೇರಿ ಹಾಗೂ ಬೆಂಗಳೂರು ಗ್ರಾಮಾಂತರ ಶಾಖಾ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಉದ್ದಿಮೆದಾರರ ಸಭೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಶೇಷವಾಗಿ ಮಹಿಳಾ ಉದ್ಯಮಿಗಳನ್ನು […]