ಬಳ್ಳಾರಿಯಲ್ಲಿ ಗಣಿಗಾರಿಕೆ ಮಿತಿ ಹೆಚ್ಚಳಕ್ಕೆ ಸುಪ್ರೀಂ ಸಮ್ಮತಿ

ನವದೆಹಲಿ,ಆ.26-ರಾಜ್ಯದ ಮೂರು ಜಿಲ್ಲೆಗಳಲ್ಲಿ ಗಣಿ ಅದಿರು ಉತ್ಪಾದನೆಯ ಪ್ರಮಾಣದ ಮಿತಿಯನ್ನು ಸುಪ್ರೀಂಕೋರ್ಟ್ ಹೆಚ್ಚಿಸಿದೆ. ಮುಖ್ಯ ನ್ಯಾಯಮೂರ್ತಿ ಎಂ.ವಿ.ರಮಣ ಅವರ ಸೇವಾ ಅವಯ ಕೊನೆಯ ದಿನವಾದ ಇಂದು ನಡೆದ ವಿಚಾರಣೆಯಲ್ಲಿ ಕರ್ನಾಟಕದ ಚಿತ್ರದುರ್ಗ, ಬಳ್ಳಾರಿ, ತುಮಕೂರು ಜಿಲ್ಲೆಗಳಲ್ಲಿ ಮಿತಿಮೀರಿ ಗಣಿಗಾರಿಕೆ ನಡೆಯುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಅತಿಯಾದ ಗಣಿಗಾರಿಕೆಯಿಂದ ಎದುರಾಗಬಹುದಾದ ಸಮಸ್ಯೆಯನ್ನು ನಿಭಾಯಿಸಲು ಮತ್ತು ಸಂತ್ರಸ್ತರಿಗೆ ಸ್ಪಂದಿಸಲು ಸಿಇಎಸ್ ಶಿಫಾರಸ್ಸುಗಳನ್ನು ಪರಿಗಣಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಗಣಿಗಾರಿಕೆಗೆ ನಿಗದಪಡಿಸಲಾಗಿರುವ ವಾರ್ಷಿಕ ಮಿತಿಯನ್ನು ತೆಗೆದು ಹಾಕುವಂತೆ ಉದ್ಯಮಗಳು ಮತ್ತು ಸರ್ಕಾರದ ಪರ […]