ಚುನಾವಣೆಗೆ ಬಿಜೆಪಿ ತಯಾರಿ: ಪ್ರಣಾಳಿಕೆ, ಪ್ರಚಾರಕ್ಕಾಗಿ ಉಸ್ತುವಾರಿಗಳ ನೇಮಕ

ಬೆಂಗಳೂರು,ಫೆ.8- ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಆಡಳಿತಾರೂಢ ಬಿಜೆಪಿ ಚುನಾವಣಾ ಪ್ರಣಾಳಿಕೆ ಸಲಹಾ ಸಮಿತಿ, ಜಿಲ್ಲಾ ಮೋರ್ಚಾ, ಫಲಾನುಭವಿಗಳ ಸಮ್ಮೇಳನ, ಯಾತ್ರ ಪ್ರಮುಖ್ ಸೇರಿದಂತೆ ಮತ್ತಿತರ ಸಮಿತಿಗಳಿಗೆ ನೇಮಕ ಮಾಡಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ಕುಮಾರ್ ಕಟೀಲ್ ಅವರು, ಸಚಿವರು, ಶಾಸಕರು, ವಿಧಾನಸಭಾ ಸದಸ್ಯರು ಹಾಗೂ ಪದಾಕಾರಿಗಳನ್ನೊಳಗೊಂಡ ಸಮಿತಿಗಳನ್ನು ನೇಮಿಸಿದ್ದಾರೆ. ಯಾತ್ರಾ ಪ್ರಮುಖ್ಗೆ ಸಚಿವ ಸಿ.ಸಿ.ಪಾಟೀಲ್, ವಿಧಾನಪರಿಷತ್ ಸದಸ್ಯ ರವಿಕುಮಾರ್ ಹಾಗು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ನೇಮಿಸಿದೆ. ಯಾತ್ರೆ 1ಗೆ ಎಂ.ರಾಜೇಂದ್ರ […]
ಕಾಂಗ್ರೆಸ್ನಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಿಯದರ್ಶಿನಿ ಪ್ರಣಾಳಿಕೆ

ಭೋಪಾಲ್,ಜ.23- ಇದೇ ವರ್ಷ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ತಯಾರಿಸಿದೆ. ಪ್ರಿಯದರ್ಶಿನಿ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಮಾಡಿದೆ, ಪಕ್ಷದ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಿಳೆಗಾಗಿ ಪ್ರತ್ಯೇಕ ಪ್ರಣಾಳಿಕೆ ರೂಪಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಿಯದರ್ಶಿನಿ ಜೊತೆಗೆ ಸಾಮಾನ್ಯ ಪ್ರಣಾಳಿಕೆಯನ್ನು ಪ್ರಕಟಿಸಲಾಗುತ್ತದೆ. ಸಮಾಜದ ವಿವಿಧ ಭಾಗಗಳಿಗೆ ಸಂಬಂಸಿದ ಬೇಡಿಕೆಗಳ ಮಾಹಿತಿಯನ್ನು ಸಂಗ್ರಹಿಸಲು ಹತ್ತು ಉಪ ಸಮಿತಿಗಳನ್ನು ರಚಿಸಲಾಗಿದೆ. ಕಾಂಗ್ರೆಸ್ […]
ಕಾಂಗ್ರೆಸ್ ಕೊಡುಗೆಗಳಿಗೆ ಟಕ್ಕರ್ ಕೊಡಲು ಕಮಲ ಪ್ರಣಾಳಿಕೆ ತಯಾರಿ

ಬೆಂಗಳೂರು,ಜ.18- ಕಾಂಗ್ರೆಸ್ ಕೆಲವೊಂದು ಜನಪ್ರಿಯ ಪ್ರಣಾಳಿಕೆ ಘೋಷಣೆಗಳನ್ನು ಮಾಡುವ ಮೂಲಕ ಮತದಾರರ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಿದೆ. ಇದಕ್ಕೆ ಕೌಂಟರ್ ಕೊಡಲು ಬಿಜೆಪಿಯೂ ಸಿದ್ದತೆ ನಡೆಸುತ್ತಿದೆ. 2023 ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೆಲವೊಂದು ಜನಪ್ರಿಯವಾದ ಘೋಷಣೆಗಳನ್ನು ಮಾಡುತ್ತಿದೆ. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಒಂದು ಕಡೆಯಾದರೆ ಪ್ರತಿ ಕುಟುಂಬ ಓರ್ವ ಮಹಿಳೆಗೆ ತಿಂಗಳಿಗೆ 2000 ರೂ.ಗಳನ್ನು ಉಚಿತ ನೀಡುವ ಮತ್ತೊಂದು ಘೋಷಣೆ ಮಾಡಿದೆ. ಸಾಮಾನ್ಯವಾಗಿ ಚುನಾವಣಾ ಪ್ರಣಾಳಿಕೆಯನ್ನು ಸಾಂಪ್ರದಾಯಿಕ ರೀತಿಯಲ್ಲಿ ಒಟ್ಟಿಗೆ […]
ನಿಮ್ಮ ಸಂಕಲ್ಪ, ನಮ್ಮ ಹೊಣೆ: ಕಾಂಗ್ರೆಸ್ ಪ್ರಣಾಳಿಕೆ ತಯಾರಿ ಆರಂಭ

ಬೆಂಗಳೂರು,ಡಿ.29- ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಪ್ರಣಾಳಿಕೆ ತಯಾರಿಕೆಯನ್ನು ಆರಂಭಿಸಿರುವ ಕಾಂಗ್ರೆಸ್ ಜನರಿಂದ ಸಲಹೆಗಳನ್ನು ಸ್ವೀಕರಿಸಲು ನಿಮ್ಮ ಸಂಕಲ್ಪ, ನಮ್ಮ ಹೊಣೆ ಎಂಬ ಕ್ಯೂಆರ್ ಕೋಡ್ ಬಿಡುಗಡೆ ಮಾಡಿದೆ. ಮುನ್ನೋಟ-2023ರ ಕ್ಯೂಆರ್ ಕೋಡ್ ಅನ್ನು ಕೆಪಿಸಿಸಿ ಕಚೇರಿಯಲ್ಲಿ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್, ನಾವು ಕೊಡುವ ಭರವಸೆಗಳು ಈಡೇರಿಕೆ, ಕಾರ್ಯಗತವಾದ ಭರವಸೆಗಳಾಗಿರಲಿವೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ್ರೆ ಏನೆಲ್ಲಾ ಕಾರ್ಯಕ್ರಮ ನೀಡಲಿದೆ ಎಂಬ ಬಗ್ಗೆ ಪ್ರಣಾಳಿಕೆ ಬಿಡುಗಡೆ […]