ಕೆಪಿಸಿಸಿ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್‍ ನೇಮಕ

ಬೆಂಗಳೂರು, ಜ.26- ಕೆಪಿಸಿಸಿ ಪ್ರಚಾರ ಸಮಿತಿಗೆ ಮಾಜಿ ಸಚಿವ ಎಂ.ಬಿ.ಪಾಟೀಲ್‍ ರನ್ನು ಅಧ್ಯಕ್ಷರನ್ನಾಗಿ ಕಾಂಗ್ರೆಸ್‍ ಹೈಕಮಾಂಡ್‍ ನೇಮಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಂಡು ಕೆಲಸ ಆರಂಭಿಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‍ ಸೂಚಿಸಿದ್ದಾರೆ. ಎಂ.ಬಿ.ಪಾಟೀಲ್‍ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದರು. ಕಳೆದ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಚರ್ಚೆಗಳು ನಡೆದಿದ್ದವು. ಲಿಂಗಾಯಿತ-ವೀರಶೈವ ಧರ್ಮಕ್ಕೆ ಸ್ವಾಯತ್ತ ಸ್ಥಾನ ಸಿಗಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನಡೆದ ಹೋರಾಟದ ಮುಂಚೂಣಿ ನಾಯಕತ್ವವನ್ನು ಎಂ.ಬಿ.ಪಾಟೀಲ್‍ ವಹಿಸಿದ್ದರು. ಕಾಂಗ್ರೆಸ್‍ […]