ಎಂಡಿ, ನಿರ್ದೇಶಕರುಗಳ ನಕಲಿ ಸಹಿ ಮಾಡಿ ಬಿಎಂಟಿಸಿ ಸಂಸ್ಥೆಗೆ ಮೋಸ

ಬೆಂಗಳೂರು,ಜ.27- ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಗುತ್ತಿಗೆ ನೀಡುತ್ತಿದ್ದ ಮಳಿಗೆಗಳು ಮತ್ತು ಶೌಚಾಲಯಗಳ ಗುತ್ತಿಗೆ ಪರವಾನಗಿಯನ್ನು ನವೀಕರಿಸುವ ಸಂಬಂಧ ಮೂವರು ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಬ್ಬರು ನಿರ್ದೇಶಕರ ಸಹಿಗಳನ್ನು ನಕಲು ಮಾಡಿ ಕರಾರು ಒಪ್ಪಂದದ ಆದೇಶ ಪತ್ರ ನೀಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ದ್ರೋಹ ಮಾಡಿ ಮೋಸ ಮಾಡಿರುವ ಬೃಹತ್ ಜಾಲ ಬೆಳಕಿಗೆ ಬಂದಿದೆ. ನಕಲು ಸಹಿ ಮಾಡಿ ಲಕ್ಷಾಂತರ ರೂ ಪಡೆದ ಭ್ರಷ್ಟ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಂಪೇಗೌಡ […]
ಮೆಟ್ರೋ ಎಂಡಿ ಅಂಜುಮ್ ಪರ್ವೇಜ್ಗೆ ಪೊಲೀಸ್ ನೋಟಿಸ್

ಬೆಂಗಳೂರು,ಜ.20- ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಸಾವು ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಇದರ ಜೊತೆಗೆ ನಮ್ಮ ಮೆಟ್ರೋ ಸಂಸ್ಥೆಯ 15 ಅಧಿಕಾರಿಗಳಿಗೂ ನೋಟೀಸ್ ಜಾರಿ ಮಾಡಲಾಗಿದೆ. ಆದರೆ, ಅಂಜುಮ್ ಪರ್ವೇಜ್ ಅವರು ಅನಾರೋಗ್ಯದ ನೆಪದಿಂದ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗುವಂತೆ ಗೋವಿಂದಪುರ ಪೊಲೀಸರು ನೋಟೀಸ್ ನೀಡಿದ್ದರು ಆದರೆ, ಅನಾರೋಗ್ಯದ ನೆಪ ಹೇಳಿರುವ ಪರ್ವೇಜ್ ಅವರು ವಿಚಾರಣೆಗೆ ಕೆಲ […]
ಬಂಧನಕ್ಕೊಳಗಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಮುಖ್ಯಸ್ಥೆ ಕೊಚ್ಚರ್ ಬಿಡುಗಡೆ

ನವದೆಹಲಿ,ಜ.9- ಅವ್ಯವಹಾರ ಆರೋಪದಡಿ ಬಂಧನಕ್ಕೊಳಗಾಗಿದ್ದ ಐಸಿಐಸಿಐ ಬ್ಯಾಂಕ್ನ ಮಾಜಿ ಮುಖ್ಯಸ್ಥೆ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಿಡುಗಡೆ ಮಾಡಲಾಗಿದೆ. ಚಂದಾ ಕೊಚ್ಚರ್ ಹಾಗೂ ಆಕೆಯ ಪತಿಯ ಬಂಧನ ಕಾನೂನು ಪ್ರಕಾರ ನಡೆದಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದ ನಂತರ ಇಬ್ಬರನ್ನು ಬಿಡುಗಡೆಗೊಳಿಸಲಾಗಿದೆ. ಚಂದಾ ಕೊಚ್ಚರ್ ಬ್ಯಾಂಕ್ ಮುಖ್ಯಸ್ಥರಾಗಿದ್ದ ಸಂದರ್ಭದಲ್ಲಿ ವಿಡಿಯೋಕಾನ್ ಗ್ರೂಫ್ಗೆ 3 ಸಾವಿರ ಕೋಟಿ ರೂ.ಗಳನ್ನು ಸಾಲವಾಗಿ ನೀಡಿ ಭಾರಿ ಪ್ರಮಾಣದ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಮೇಲೆ […]