ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಗೆ ಕಾವೇರಿ ಹೆಸರು

ಬೆಂಗಳೂರು,ಡಿ.22- ಈಗಾಗಲೇ ಭಾಗಶಃ ತೆರೆಯಲಾದ 119 ಕಿಮೀ ಉದ್ದದ ದಶಪಥಗಳ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನ್ನು ಭಾರತಮಾಲಾ ಪರಿಯೋಜನಾ ಹಂತ-1ರಡಿ ನಿರ್ಮಿಸಲಾಗಿದೆ. ಈ ಎಕ್ಸ್ಪ್ರೆಸ್ವೇಯಿಂದ ಹಲವು ರೀತಿಯ ಪ್ರಯೋಜನಗಳಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಸೇರಿದಂತೆ ಉಭಯ ನಗರಗಳಿಗೆ ಬಹಳಷ್ಟು ಅನುಕೂಲ ಕಲ್ಪಿಸಲಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕೇವಲ 90 ನಿಮಿಷಗಳಿಗೆ ಇಳಿಸುವ ನಿರೀಕ್ಷೆಯಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ […]
ಉದ್ದೇಶಪೂರ್ವಕವಾಗಿಯೇ ರೈಲಿನ ಹೆಸರು ಬದಲಾವಣೆ: ಪ್ರತಾಪ್ಸಿಂಹ
ಮೈಸೂರು, ಅ.12- ರೈಲಿಗೆ ಟಿಪ್ಪು ಹೆಸರನ್ನು ಉದ್ದೇಶಪೂರ್ವಕವಾಗಿಯೇ ಬದಲಾಯಿಸಲಾಗಿದೆ ಎಂದು ಸಂಸದ ಪ್ರತಾಪ್ಸಿಂಹ ತಿಳಿಸಿದರು. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರೈಲ್ವೆ ಇತಿಹಾಸದಲ್ಲೇ ರೈಲಿಗೆ ಹೆಸರಿಡುವ ಸಂಪ್ರದಾಯ ನಡೆದು ಬಂದಿದೆ. ಆದರೆ ಇಟ್ಟ ಹೆಸರನ್ನು ಬದಲಿಸಿರುವುದು ಇದೇ ಮೊದಲು ಎಂದರು. ಮೈಸೂರಿಗೆ ಟಿಪ್ಪು ಕೊಡುಗೆ ಏನೇನೂ ಇಲ್ಲ, ಹಾಗಾಗಿ ರೈಲಿಗೆ ಟಿಪ್ಪು ಹೆಸರು ಬದಲಾಯಿಸಿ ಒಡೆಯರ ಹೆಸರನ್ನು ಇಡಲಾಗಿದೆ. ಒಡೆಯರ ಅವರ ಕೊಡುಗೆ ನೂರಾರು ಇದೆ. ಟಿಪ್ಪು ಕೊಡುಗೆ ಏನಿದೆ ವಿವರಿಸಲಿ ಎಂದು […]