ಬೆಂಗಳೂರಿನ ನಡುರಸ್ತೆಯಲ್ಲೇ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಭೀಕರ ಕೊಲೆ
ಬೆಂಗಳೂರು, ಫೆ.9- ಹಾಡಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ.ವಿದ್ಯಾರಣ್ಯಪುರ ನಿವಾಸಿ ವಿಶ್ವನಾಥ್ ಅಲಿಯಾಸ್ ಕುಳ್ಳ ವಿಶ್ವ (39) ಕೊಲೆಯಾದ ವ್ಯಕ್ತಿ.ವಕೀಲರೊಬ್ಬರ ಕಚೇರಿಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ್ ಇಂದು ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಸ್ನೇಹಿತನನ್ನು ಭೇಟಿ ಮಾಡಲು ದ್ವಿಚಕ್ರ ವಾಹನದಲ್ಲಿ ನರಸಿಂಹಸ್ವಾಮಿ ಬಡಾವಣೆಗೆ ಬಂದಿದ್ದಾನೆ. ಬೈಕ್ ನಿಲ್ಲಿಸಿ ಸ್ನೇಹಿತನ ಮನೆಗೆ ನಡೆದು ಹೋಗುತ್ತಿದ್ದಾಗ ಆಟೋದಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು […]