ರಾಜ್ಯದಲ್ಲಿ ಮತ್ತೆ ಮಳೆ

ಬೆಂಗಳೂರು,ಅ.3- ಬಂಗಾಳಕೊಲ್ಲಿ ಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿ ಗಾಳಿಯಿಂದಾಗಿ ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ನಿನ್ನೆಯಿಂದ ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಇಂದು ಮತ್ತು ನಾಳೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮುಂಗಾರು ಮರಳುವಿಕೆ ಹಾಗೂ ಹಿಂಗಾರು ಆರಂಭವಾಗುವ ಪರ್ವ ಕಾಲ ಇದಾಗಿದ್ದು, ಚದುರಿದಂತೆ ರಾಜ್ಯದ ಒಳನಾಡಿನಲ್ಲಿ ಮಳೆಯಾಗಲಿದೆ. ಆದರೆ ವ್ಯಾಪಕ ಪ್ರಮಾಣದಲ್ಲಿ ಭಾರೀ ಮಳೆಯಾಗುವ ಲಕ್ಷಣಗಳು […]