ಜನತಾ ಪರಿವಾರದ ನಾಯಕ ಸಿಂ.ಲಿಂ.ನಾಗರಾಜು ವಿಧಿವಶ

ಬೆಂಗಳೂರು, ಡಿ.3- ಜನತಾ ಪರಿವಾರದ ಹಿರಿಯ ನಾಯಕ, ಕನ್ನಡಪರ ಹಾಗೂ ರೈತಪರ ಹೋರಾಟಗಾರರಾದ ಸಿಂ.ಲಿಂ.ನಾಗರಾಜು ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷವಾಗಿತ್ತು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರದಲ್ಲಿ ಹೃದಯಾಘಾ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಚನ್ನಪಟ್ಟಣದ ಗಾಂಧಿ ಭವನದಲ್ಲಿ ಮಧ್ಯಾಹ್ನದವರೆಗೂ ಮೃತರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಚನ್ನಪಟ್ಟಣದಲ್ಲಿ ಅಜಾತಶತ್ರುವೆಂದೇ ಚಿರಪರಿಚಿತರಾಗಿದ್ದ ಅವರು, ಕಳೆದ 1967ರಿಂದಲ್ಲೂ ಸಕ್ರೀಯ ರಾಜಕಾರಣದಲ್ಲಿದ್ದರು. ಕಳೆದ […]
ಅಮೆರಿಕದಲ್ಲಿ ಭಾರತೀಯರನ್ನು ಒಗ್ಗೂಡಿಸಿದ್ದ ಕನ್ನಡಿಗ ಹನುಮಂತಯ್ಯ ಮರೂರು ವಿಧಿವಶ

ಬೆಂಗಳೂರು ನ.12- ಅಮೆರಿಕಾದಲ್ಲಿ ಭಾರತೀಯರನ್ನು ಒಗ್ಗೂಡಿಸುವಲ್ಲಿ ಮತ್ತು ಸನಾತನ ಸಂಸ್ಕøತಿಯನ್ನು ಪ್ರೋತ್ಸಾಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹನುಮಂತಯ್ಯ ಮರೂರು (82) ನಿನ್ನೆ ಸಂಜೆ ಮಿಂಚಿಂಗನ್ನಲ್ಲಿ ನಿಧನರಾಗಿದ್ದಾರೆ. ಕಳೆದ ಹತ್ತು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಅಮೆರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮರೂರು ಗ್ರಾಮದವರಾದ ಹನುಮಂತಯ್ಯ ಎಂಜಿನಿಯರ್ ಪದವೀಧರರಾಗಿದ್ದು, 70ರ ದಶಕದಲ್ಲಿ ಅಮೆರಿಕಾಗೆ ತೆರಳಿದ್ದರು. ವೃತ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ ಅವರು, ಅಮೆರಿಕಾದ ಮಿಂಚಿಂಗನ್ನ ಪ್ಲಿಂಟ್ನಲ್ಲಿ […]