ರಾಹುಲ್ ಪಾದಯಾತ್ರೆಯಲ್ಲಿ PayCM ಸದ್ದು, ಬೆಲೆ ಏರಿಕೆ ವಿರುದ್ಧ ಆಕ್ರೋಶ
ಮಂಡ್ಯ, ಅ.6- ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಬೆಲೆ ಏರಿಕೆ, ಕೋಮುವಾದದ ವಿರುದ್ಧ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಎರಡು ದಿನಗಳ ವಿಶ್ರಾಂತಿ ಬಳಿಕ ಇಂದು ಮತ್ತೆ ಆರಂಭವಾಯಿತು. ಮುಂಜಾನೆ ಪಾಂಡವಪುರ ಬೆಳ್ಳಾಲೆ ಪ್ರಾಥಮಿಕ ಆರೋಗ್ಯಕೇಂದ್ರದಿಂದ ಆರಂಭಗೊಂಡ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆ ಇಂದು ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು. ಎಂದಿನಂತೆ ಜನಸಾಮಾನ್ಯರು ರಾಹುಲ್ಗಾಂ ಅವರನ್ನು ಭೇಟಿ ಮಾಡಿ ಸಂಭ್ರಮಿಸಿದರು. ವಿಶೇಷ ಚೇತನರು ಯಾತ್ರೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಮಕ್ಕಳು ರಾಹುಲ್ಗಾಂ ಅವರ ಕೈ ಹಿಡಿದು […]