ತವರಿನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವುದು ಅಸಾಧ್ಯ : ರಮೀಜ್ ರಾಜಾ

ನವದೆಹಲಿ, ಫೆ. 20- ತವರು ಅಂಗಳದಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾರತ ಬಲಿಷ್ಠವಾಗಿದ್ದು, ಆ ತಂಡವನ್ನು ಸೋಲಿಸುವುದು ಅತ್ಯಂತ ಕಠಿಣ ಕೆಲಸ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ರಮೀಜ್ ರಾಜಾ ಅವರು ಶ್ಲಾಘಿಸಿದ್ದಾರೆ. ಐಸಿಸಿ ಆಯೋಜನೆಯ 2ನೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಗವಾಗಿ ನಡೆಯುತ್ತಿರುವ ಪ್ರತಿಷ್ಠಿತ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಪಡೆ ಆಸ್ಟ್ರೇಲಿಯಾ ವಿರುದ್ಧ 2-0 ಯಿಂದ ಸರಣಿಯಲ್ಲಿ ಮುನ್ನಡೆ ಪಡೆದಿರುವ ಬೆನ್ನಲ್ಲೇ ಪಾಕ್ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಟೀಮ್ […]
ಏಷ್ಯಾ ಕಪ್ ಪಂದ್ಯದ ಭವಿಷ್ಯ ಬಿಸಿಸಿಐ ನಿರ್ಧರಿಸಲಿದೆ ; ರೋಹಿತ್

ನವದೆಹಲಿ,ಅ.22- ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ತಂಡ ಭಾಗವಹಿಸುವ ಬಗ್ಗೆ ಬಿಸಿಸಿಐ ನಿರ್ಧರಿಸಲಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಅಭಿಪ್ರಾಯಪಟ್ಟಿದ್ದಾರೆ. ಸಧ್ಯ ನಾವು ಟಿ-20 ವಿಶ್ವಕಪ್ ಬಗ್ಗೆ ಮಾತ್ರ ತಲೆಕೆಡಿಸಿಕೊಂಡಿದ್ದೇವೆ. ನಮಗೆ ಮೊದಲು ಕಪ್ ಗೆಲ್ಲುವುದು ಮುಖ್ಯ ಇತರ ಪಂದ್ಯಗಳ ಬಗ್ಗೆ ಬಿಸಿಸಿಐ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. 2023ರಲ್ಲಿ ಪಾಕ್ನಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಭಾಗವಹಿಸುತ್ತಿಲ್ಲ. ಒಂದು ವೇಳೆ ತಟಸ್ಥ ಸ್ಥಳದಲ್ಲಿ ಪಂದ್ಯ ನಡೆದರೆ […]