ಬೆಂಗಳೂರಿನಲ್ಲಿರುವ ಎಲ್ಲಾ ಫ್ಲೈಓವರ್ಗಳ ಮೌಲ್ಯ ಮಾಪನಕ್ಕೆ ಆಗ್ರಹ
ಬೆಂಗಳೂರು,ಫೆ.17- ಪೀಣ್ಯ ಮೇಲ್ಸೇತುವೆ ಕಳಪೆ ಎಂದು ಸಾಬೀತಾಗಿರುವ ಹಿನ್ನಲೆಯಲ್ಲಿ ನಗರದಲ್ಲಿರುವ ಎಲ್ಲ ಫ್ಲೈಓವರ್ಗಳ ಮೌಲ್ಯಮಾಪನ ನಡೆಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ದೀರ್ಘಾವ ಆಯುಷ್ಯ ಹೊಂದಿದೆ ಎನ್ನಲಾದ ಪೀಣ್ಯ ಮೇಲ್ಸೇತುವೆ ಕಾಮಗಾರಿ ಅವಗೂ ಮುನ್ನವೇ ಕಳಪೆ ಎಂದು ಸಾಬೀತಾಗಿರುವ ಹಿನ್ನಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಿರುವ ನೂರಾರು ಮೇಲ್ಸೇತುವೆಗಳ ಮೌಲ್ಯಮಾಪನ ನಡೆಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು, ಈ ವಿಷಯವನ್ನು ಅಧಿವೇಶನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಅವರು ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ […]