ರಾಯಚೂರು ತಲುಪಿದ ರಾಹುಲ್ ಭಾರತ್ ಜೋಡೋ ಯಾತ್ರೆ

ರಾಯಚೂರು, ಅ.21- ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಇಂದು ಆಂಧ್ರ ಪ್ರದೇಶದ ಮಂತ್ರಾಲಯದಿಂದ ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮಕ್ಕೆ ಆಗಮಿಸಿದೆ. ಕಳೆದ ನಾಲ್ಕು ದಿನಗಳಿಂದ ಆಂಧ್ರ ಪ್ರದೇಶದಲ್ಲಿ ನಡೆದ ಯಾತ್ರೆಯಲ್ಲಿ ರಾಹುಲ್‍ಗಾಂಧಿ ಕಾರ್ಮಿಕರು, ಕೃಷಿಕರು, ಪೌರ ಕಾರ್ಮಿಕರು, ಉದ್ಯಮಿಗಳು ಸೇರಿದಂತೆ ಹಲವಾರು ಜನರೊಂದಿಗೆ ಸಂವಾದ ನಡೆಸಿದರು. ಇಂದಿನಿಂದ ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯಲ್ಲಿ ಪಾದಯಾತ್ರೆ ಸಂಚರಿಸಲಿದೆ. ರಾಜ್ಯದಲ್ಲಿ ಸೆ.30 ರಿಂದ ಅ.15ರ ವರೆಗೆ ನಿರಂತರವಾಗಿ ನಡೆದ ಪಾದಯಾತ್ರೆ […]