500 ಕೋಟಿ ರೂ. ವೆಚ್ಚದ ‘ರೈತ ಶಕ್ತಿ’ ಯೋಜನೆ ಘೋಷಣೆ
ಬೆಂಗಳೂರು, ಮಾ.4- ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿ ಮೊದಲ ಬಾರಿಗೆ ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಿದ್ದು , 500 ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸಭೆಯಲ್ಲಿಂದು 2022-23ನೆ ಸಾಲಿನ ಆಯವ್ಯಯ ಮಂಡಿಸಿದ ಅವರು, ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಠ 5 ಎಕರೆವರೆಗೆ ಡಿಬಿಟಿ ಮೂಲಕ ಡಿಸೇಲ್ ಸಹಾಯವನ್ನು ನೀಡಲು ರೈತ ಶಕ್ತಿ ಯೋಜನೆ ಜಾರಿಗೆ ತರುವ […]