ಬೆಂಗಳೂರಿಗರೇ ನಾಳೆ ರಸ್ತೆಗಿಳಿಯುವ ಮುನ್ನ ಇಲ್ಲಿ ಗಮನಿಸಿ

ಬೆಂಗಳೂರ,ನ. 10- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಭವನ ರಸ್ತೆ, ಪ್ಯಾಲೆಸ್ ರಸ್ತೆ, ರೇಸ್ಕೋರ್ಸ್, ಸ್ಯಾಂಕಿ ರೋಡ್, ಶೇಷಾದ್ರಿಪುರಂ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸವಾರರು ಈ ಮಾರ್ಗಗಳಲ್ಲಿ ಸಂಚರಿಸದೆ ಪರ್ಯಾಯ ರಸ್ತೆ ಬಳಸುವಂತೆ ಈಗಾಗಲೇ ಪ್ರಕಟಣೆಯಲ್ಲಿ ತಿಳಿಸಿದ್ದೇವೆ. ಅದರಂತೆ ಸಾರ್ವಜನಿಕರು […]