ಮದ್ರಾಸ್ ಹೈಕೋರ್ಟ್ನಲ್ಲಿ ಪನ್ನೀರ್ ಸೆಲ್ವಂಗೆ ಮುಖಭಂಗ

ಚೆನ್ನೈ,ಮಾ.28- ಮಾಜಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯನ್ನಾಗಿ ಘೋಷಿಸಿರುವ ಪಕ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಮತ್ತು ತಮ್ಮನ್ನು ಉಚ್ಛಾಟಿಸಿರುವುದನ್ನು ಪ್ರಶ್ನಿಸಿ ಓ.ಪನ್ನೀರ್ ಸೆಲ್ವಂ ಮತ್ತು ಆಪ್ತರು ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕೆ.ಪಳನಿಸ್ವಾಮಿ ಎಐಎಡಿಎಂಕೆ ನಾಯಕತ್ವ ಅಭಾದಿತವಾಗಿದೆ. ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ನಾಯಕತ್ವದ ವಿವಾದ ಮತ್ತಷ್ಟು ಕಗ್ಗಂಟಾಗಿದೆ. ಪನ್ನೀರ್ ಸೆಲ್ವಂ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಎಐಎಡಿಎಂಕೆ ಪರ ವಕೀಲ […]
One Rank, One Pension ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನೆಡೆ

ನವದೆಹಲಿ,ಮಾ.20- ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಒನ್ ರ್ಯಾಂಕ್ ಒನ್ ಪೆನ್ಷನ್ ವಿಷಯದಲ್ಲಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮುಚ್ಚಿದ ಲಕೋಟೆಯ ಅಭಿಪ್ರಾಯವನ್ನು ಸ್ವೀಕರಿಸಲು ನಿರಾಕರಿಸಿದೆ. ಜೊತೆ ಬಾಕಿ ಪಾವತಿಗೆ ಕಾಲ ಮಿತಿಯ ಗಡುವು ನೀಡಿದೆ. ಒನ್ ರ್ಯಾಂಕ್-ಒನ್ ಪೆನ್ಷನ್ (ಒಆರ್ಒಪಿ) ಜಾರಿ ಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸೈನಿಕರ ಹಿತಾಸಕ್ತಿಗೆ ಬದ್ಧವಾಗಿ ನಡೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಆದರೆ ಒಆರ್ಒಪಿ ಯೋಜನೆಯಡಿ ಇನ್ನೂ ಹಲವಾರು ಮಂದಿಗೆ ಬಾಕಿ ಪಾವತಿಯಾಗಿಲ್ಲ ಎಂದು ಸಲ್ಲಿಸಲಾಗಿರುವ ಆಕ್ಷೇಪಣಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ […]
ಭೂಪಾಲ್ ಅನಿಲ ದುರಂತ : ಹೆಚ್ಚುವರಿ ಪರಿಹಾರಕ್ಕೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾ

ನವದೆಹಲಿ,ಮಾ.14- ವಿಶ್ವವೇ ಬೆಚ್ಚಿ ಬಿದ್ದಿದ್ದ 1984 ರ ಭೂಪಾಲ್ ಅನಿಲ ದುರಂತದಲ್ಲಿನ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಖಾಸಗಿ ಸಂಸ್ಥೆಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡಲು ಅವಕಾಶ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ನೇತೃತ್ವದ ಐವರು ನ್ಯಾಯಾೀಧಿಶರ ಸಂವಿಧಾನ ಪೀಠವು ಎರಡು ದಶಕಗಳ ನಂತರ ಕ್ರಮ ಕೈಗೊಳ್ಳಬೇಕು ಎಂಬುದರಲ್ಲಿ ಯಾವುದೇ ತರ್ಕವಿಲ್ಲ ಎಂದು ಅಭಿಪ್ರಾಯಟ್ಟಿದೆ. 1984ರ ಡಿಸೆಂಬರ್ 2 ಮತ್ತು 3ರ ಮಧ್ಯರಾತ್ರಿಯಲ್ಲಿ ಯುಸಿಸಿ […]
ಕೊಲಿಜಿಯಂನ 19 ಹೆಸರುಗಳು ತಿರಸ್ಕಾರ : ಕೇಂದ್ರ – ನ್ಯಾಯಾಂಗ ಸಂಘರ್ಷ..?

ನವದೆಹಲಿ,ನ.30- ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ಶಿಫಾರಸ್ಸು ಮಾಡಿದ್ದ 21 ಮಂದಿ ಹೆಸರುಗಳ ಪೈಕಿ 19ನ್ನು ಕೇಂದ್ರ ಸರ್ಕಾರ ತಿರಸ್ಕರಿಸುವ ಮೂಲಕ ಹೊಸ ಬಿಕ್ಕಟ್ಟು ಸೃಷ್ಟಿಯಾಗಿದೆ. ಸುಪ್ರೀಂಕೋರ್ಟ್ನ ಎರಡು ತೀರ್ಪುಗಳನ್ನು ಆಧರಿಸಿ ದೇಶದಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲಿಜಿಯಂ ರಚನೆಯಾಗಿದೆ. ಹೈಕೋರ್ಟ್, ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳ ನೇಮಕಾತಿಗೆ ಈ ಕೊಲಿಜಿಯಂ ಹೆಸರುಗಳನ್ನು ಶಿಫಾರಸ್ಸು ಮಾಡಿದೆ. ಅದನ್ನು ಪ್ರಧಾನಮಂತ್ರಿಗಳ ಕಚೇರಿ ಪರಿಶೀಲಿಸುವ ಮೂಲಕ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಲಿದ್ದು, ನಂತರ ನ್ಯಾಯಮೂರ್ತಿಗಳ ನೇಮಕಾತಿ ಯಾಗಲಿದೆ. ಒಂದು ವೇಳೆ ಪಟ್ಟಿಯಲ್ಲಿ ಲೋಪವಿದ್ದರೆ […]