ಉದ್ದೇಶಪೂರ್ವಕವಾಗಿಯೇ ರೈಲಿನ ಹೆಸರು ಬದಲಾವಣೆ: ಪ್ರತಾಪ್ಸಿಂಹ
ಮೈಸೂರು, ಅ.12- ರೈಲಿಗೆ ಟಿಪ್ಪು ಹೆಸರನ್ನು ಉದ್ದೇಶಪೂರ್ವಕವಾಗಿಯೇ ಬದಲಾಯಿಸಲಾಗಿದೆ ಎಂದು ಸಂಸದ ಪ್ರತಾಪ್ಸಿಂಹ ತಿಳಿಸಿದರು. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರೈಲ್ವೆ ಇತಿಹಾಸದಲ್ಲೇ ರೈಲಿಗೆ ಹೆಸರಿಡುವ ಸಂಪ್ರದಾಯ ನಡೆದು ಬಂದಿದೆ. ಆದರೆ ಇಟ್ಟ ಹೆಸರನ್ನು ಬದಲಿಸಿರುವುದು ಇದೇ ಮೊದಲು ಎಂದರು. ಮೈಸೂರಿಗೆ ಟಿಪ್ಪು ಕೊಡುಗೆ ಏನೇನೂ ಇಲ್ಲ, ಹಾಗಾಗಿ ರೈಲಿಗೆ ಟಿಪ್ಪು ಹೆಸರು ಬದಲಾಯಿಸಿ ಒಡೆಯರ ಹೆಸರನ್ನು ಇಡಲಾಗಿದೆ. ಒಡೆಯರ ಅವರ ಕೊಡುಗೆ ನೂರಾರು ಇದೆ. ಟಿಪ್ಪು ಕೊಡುಗೆ ಏನಿದೆ ವಿವರಿಸಲಿ ಎಂದು […]