ಶಾಸಕ ರೇಣುಕಾಚಾರ್ಯ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

ದಾವಣಗೆರೆ,ನ.9-ಶಾಸಕ ಎಂ.ಪಿ.ರೇಣುಕಾಚಾರ್ಯ ಸೋದರ ಪುತ್ರನ ಸಾವು ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಹೊನ್ನಾಳಿಯ ರೇಣುಕಾಚಾರ್ಯ ಅವರ ನಿವಾಸಕ್ಕೆ ಆಗಮಿಸಿದ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರ್ ಸಾವಿನ ಪ್ರಕರಣವನ್ನು ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ. ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಇಂತಹ ಘಟನೆ ನಡೆಯುತ್ತದೆ ಎಂದು ಸ್ವತಃ ನಾನು ಕೂಡ ನಿರೀಕ್ಷೆ ಮಾಡಿರಲಿಲ್ಲ. […]
ಚಂದ್ರಶೇಖರ್ ಸಾವಿನ ಕುರಿತು ಸಮಗ್ರ ತನಿಖೆ : ಸಿಎಂ ಬೊಮ್ಮಾಯಿ

ಬೆಂಗಳೂರು,ನ.6- ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅನುಮಾನಸ್ಪದ ಸಾವಿನ ಪ್ರಕರಣದಲ್ಲಿ ಸಣ್ಣ ಸುಳಿವನ್ನು ಬಿಡದೆ ಎಲ್ಲ ಆಯಾಮಗಳಲ್ಲಿ ಸಮಗ್ರ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆರ್ಟಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಾವರ್ಜನಿಕರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಶಾಸಕ ರೇಣುಕಾಚಾರ್ಯ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ. ಯಾವುದೇ ಅನುಮಾನಗಳಿದ್ದರೂ ಸಣ್ಣಪುಟ್ಟ ಬೆಳವಣಿಗೆಗಳಿದ್ದರೂ ಅದನ್ನು ನನ್ನ ಗಮನಕ್ಕೆ ತನ್ನಿ. ಸಮಗ್ರ ತನಿಖೆಗೆ ನಿರ್ದೇಶನ ನೀಡುತ್ತೇನೆ […]
ಸಿದ್ದು ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಬೆಂಗಳೂರು,ಸೆ.29- ಸಿದ್ದರಾಮಯ್ಯನವರು ಹಿರಿಯರು, ಅಪಾರ ಅನುಭವಸ್ಥರು. ಅವರು ಸಿಎಂ ಆಗಿದ್ದಾಗ 175 ಪಿಎಫ್ಐ ಕಾರ್ಯಕರ್ತರ ಮೇಲಿನ ಕೇಸ್ಗಳನ್ನು ವಾಪಸ್ ಪಡೆದುಕೊಂಡರು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಯಾವ ಕಾರಣಕ್ಕೆ ಕೇಸ್ ವಾಪಸ್ ಪಡೆದರು ಎಂದು ಪ್ರಶಸ್ನಿಸಿದ ಅವರು,ಆದರೆ, ಅದರ ಪರಿಣಾಮ ಮಾತ್ರ ಹಿಂದೂ, ಬಿಜೆಪಿ ಕಾರ್ಯಕರ್ತರ ಮೇಲಾಗಿ ಕೊಲೆಯಾಯಿತು ಎಂದರು. ಸಿದ್ದರಾಮಯ್ಯ ಅಲ್ಪಸಂಖ್ಯಾತರ ವೋಟ್ ಬ್ಯಾಂಕ್ ಮಾಡಿಕೊಳ್ಳುತ್ತಿದ್ದಾರೆ ಟೀಕಿಸಿದ ಅವರು, ಹಿಂದುತ್ವಕ್ಕೆ ಮೊದಲು ತನ್ನನ್ನು ಸಮರ್ಪಿಸಿಕೊಂಡ ಸಂಸ್ಥೆ ಆರ್ಎಸ್ಎಸ್ ದೇಶ ವಿರೋಧಿ ಚಟುವಟಿಕೆ […]
ಟಿಪ್ಪು ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ, ವಾದ ಮಂಡಿಸಿದ ರೇಣುಕಾಚಾರ್ಯ
ಬೆಂಗಳೂರು,ಆ.17- ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ವೀರ ಸಾರ್ವಕರ್ ಒಬ್ಬ ಅಪ್ಪಟ ದೇಶಪ್ರೇಮಿ, ಟಿಪ್ಪು ಸುಲ್ತಾನ್ ಓರ್ವ ದೇಶದ್ರೋಹಿ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಅಂಡಮಾನ್ನ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ವೀರ ಸಾರ್ವಕರ್ ಎಲ್ಲಿ? ಬ್ರಿಟಿಷರ ವಿರುದ್ಧ ಹೋರಾಟವನ್ನೇ ಮಾಡದ ಟಿಪ್ಪು ಸುಲ್ತಾನ್ ಒಬ್ಬ ಮತಾಂಧ ಎಂದು ಕಿಡಿಕಾರಿದರು. ಟಿಪ್ಪು ಸುಲ್ತಾನ್ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಟವನ್ನೇ ನಡೆಸಲಿಲ್ಲ.ಆತ ಮರಣ ಹೊಂದಿದ್ದು, 1799ರಲ್ಲಿ. ದೇಶದ […]