ಇಸ್ರೇಲ್ನಲ್ಲಿ ನಾಪತ್ತೆಯಾಗಿದ್ದ ಕೇರಳದ ರೈತ ಭಾರತಕ್ಕೆ ವಾಪಸ್

ಕೋಝಿಕ್ಕೋಡ್ (ಕೇರಳ), ಫೆ.27 – ಆಧುನಿಕ ಕೃಷಿ ತಂತ್ರಜ್ಞಾನಗಳ ಅಧ್ಯಯನಕ್ಕಾಗಿ ಇಸ್ರೇಲ್ಗೆ ಸರ್ಕಾರಿ ಪ್ರಾಯೋಜಿತ ಪ್ರವಾಸದ ಭಾಗವಾಗಿ ಹೋಗಿ ನಾಪತ್ತೆಯಾಗಿದ್ದ ಕೇರಳದ ರೈತರೊಬ್ಬರು ಇಂದು ಭಾರತಕ್ಕೆ ಮರಳಿದ್ದಾರೆ. ಮುಂಜಾನೆ 5 ಗಂಟೆಗೆ ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರೈತ ಬಿಜು ಕುರಿಯನ್ (48) ಸುದ್ದಿಗಾರರೊಂದಿಗೆ ಮಾತನಾಡಿ, ಕೇರಳ ಸರ್ಕಾರ, ರಾಜ್ಯ ಕೃಷಿ ಸಚಿವ ಪಿ ಪ್ರಸಾದ್ ಹಾಗು 27 ಸದಸ್ಯರ ನಿಯೋಗ, ಅಧಿಕಾರಿಗಳಿಗೆ ಕ್ಷಮೆಯಾಚಿಸುತ್ತಿದ್ದೇನೆ ಎಂದು ಬಾವುಕರಾದರು. ಇಸ್ರೇಲ್ನಿಂದ ಹೊಸ ಕೃಷಿ ತಂತ್ರಗಳನ್ನು ಕುರಿತು ಅಧ್ಯಯನ […]
ಗಾಯಕ ಸಿಧು ಮೂಸೆವಾಲಾ ಹಂತಕ ಗೋಲ್ಡಿ ಅಮೆರಿಕಾದಲ್ಲಿ ಸೆರೆ..!

ನವದೆಹಲಿ,ನ.2- ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ನನ್ನು ಅಮೆರಿಕಾದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯ ಗೋಲ್ಡಿ ಬ್ರಾರ್ ಇತ್ತೀಚೆಗೆ ಕೆನಡಾದಿಂದ ಅಮೆರಿಕಾಕ್ಕೆ ಬಂದು ನೆಲೆಸಿದ್ದು, ಕೆಲ ದಿನಗಳ ಹಿಂದಷ್ಟೆ ಆತನನ್ನು ಕ್ಯಾಲಿಫೋರ್ನಿಯಾ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಗೋಲ್ಡಿಬ್ರಾರ್ ಬಂಧನ ಕುರಿತಂತೆ ಅಮೆರಿಕಾದಿಂದ ಭಾರತಕ್ಕೆ ಯಾವುದೇ ಅಧಿಕೃತ ಮಾಹಿತಿ ರವಾನೆಯಾಗಿಲ್ಲ ಎಂದು ಮೂಲಗಳು ವಿವರಿಸಿವೆ. ಮೂಸೆವಾಲಾ ಹತ್ಯೆಯ ಜವಾಬ್ದಾರಿಯನ್ನು […]