ಎಲೆಚುಕ್ಕಿರೋಗ : ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಸರ್ಕಾರಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಮನವಿ

ಬೆಂಗಳೂರು, ಅ.29- ಅಡಿಕೆ ಮರಗಳಿಗೆ ಮಾರಣಾಂತಿಕವಾದ ಎಲೆಚುಕ್ಕಿರೋಗ ಹರಡಿ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿ ಭಾರೀ ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಅವರ ನೆರವಿಗೆ ಧಾವಿಸಬೇಕೆಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಮಲೆನಾಡು ಪ್ರಾಂತ್ಯವಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಲ್ಲಿ ಅತಿಯಾದ ಮಳೆಯಿಂದ ಈ ಭಾಗದ ರೈತರ ಜೀವನಾಧಾರವಾಗಿರುವ ಅಡಿಕೆ, ಕಾಫಿ, ಮೆಣಸು ಬೆಳೆಗಳು ಶೇ.90ರಷ್ಟು ಹಾನಿಗೊಳಗಾಗಿವೆ. ಅಡಿಕೆ […]