ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಣಯಕ್ಕೆ ಭಾರತ ವಿರೋಧ

ವಿಶ್ವಸಂಸ್ಥೆ,ಡಿ.10- ನಿರ್ಬಂಧಗಳ ಹೊರತಾಗ ಮಾನವೀಯ ನೆರವು ನೀಡುವ ಪ್ರಯತ್ನಗಳನ್ನು ಪುಷ್ಟೀಕರಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯವನ್ನು ವಿರೋಧಿಸಿ ಭಾರತ ಮತದಾನದಲ್ಲಿ ತಟಸ್ಥವಾಗಿ ಉಳಿದಿದೆ.ಅಮೆರಿಕ ಮತ್ತು ಇಸ್ರೇಲ್ ದೇಶಗಳಿಂದ ಮಂಡನೆಯಾದ ನಿರ್ಣಯ ಕುರಿತು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಚರ್ಚಿಸಲಾಗಿದೆ. 15 ಸದಸ್ಯ ರಾಷ್ಟ್ರಗಳ 14 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ. ಭಾರತ ತಟಸ್ಥವಾಗಿ ಉಳಿದಿದೆ.ಆದರೆ ಚರ್ಚೆಯಲ್ಲಿ ಭಾಗವಹಿಸಿದ ವಿಶ್ವಸಂಸ್ಥೆಯ ಭಾರತದ ಖಾಯಂ ರಾಯಭಾರಿ ರುಚಿರಕಾಂಬೋಜ್ ಅವರು ಮಾನವೀಯ ನೆರವನ್ನು ದುರುಪಯೋಗಪಡಿಸಿ ಕೊಂಡು ಉಗ್ರ ಸಂಘಟನೆಗಳು ಬಲಿಷ್ಠ ಗೊಳ್ಳುತ್ತವೆ […]
ರಾಹುಲ್ ಗಾಂಧಿಗೆ ಎಐಸಿಸಿ ಪಟ್ಟ ಕಟ್ಟಲು
ರಾಜಸ್ಥಾನ ಕಾಂಗ್ರೆಸ್ ನಿರ್ಣಯ
ಜೈಪುರ,ಸೆ.18-ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು ಎಂದು ರಾಜಸ್ಥಾನದ ಪ್ರದೇಶ ಕಾಂಗ್ರೆಸ್ ಸಮಿತಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ನಿನ್ನೆ ನಡೆದ ಪಕ್ಷದ ಸದಸ್ಯರ ಸಭೆಯಲ್ಲಿ ಎರಡು ನಿರ್ಣಯಗಳನ್ನು ಮಂಡಿಸಲಾಗಿದೆ. ಪಕ್ಷದ ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿರ್ಣಯಕ್ಕೆ ಎಲ್ಲರೂ ಬದ್ದವಾಗಿರುವುದು ಒಂದನೇ ನಿರ್ಣಯವಾದರೆ, ಮತ್ತೊಂದು ನಿರ್ಣಯವನ್ನು ಮುಖ್ಯಮಂತ್ರಿ ಅಶೋಕ್ ಗೆಲ್ಹೋಟ್ ಮಂಡಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲು ಮನವಿ ಮಾಡಲಾಗಿದೆ. ಇದಕ್ಕೆ ಎಲ್ಲರೂ ಸರ್ವಾನುಮತದ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ […]