ವಂದೇ ಭಾರತ್ ಎಕ್ಸ್ ಪ್ರೆಸ್ಗೆ ಎದುರಾಗುತ್ತಲೇ ಇದೆ ವಿಘ್ನಗಳು

ನವದೆಹಲಿ,ಅ.9-ಹೊಸದಾಗಿ ಪ್ರಾರಂಭವಾದ ವಂದೇ ಭಾರತ್ ಎಕ್ಸ್ಪ್ರೆಸ್ಗೆ ನಿರಂತರ ವಿಘ್ನಗಳು ಎದುರಾಗುತ್ತಲೇ ಇದೆ. ವಂದೇ ಭಾರತ್ ಹೈಸ್ಪೀಡ್ ರೈಲು ಎಮ್ಮೆಗಳ ಹಿಂಡಿಗೆ ಗುದ್ದಿ ಸುದ್ದಿಯಾಗಿತ್ತು. ಈಗ ಬೇರಿಂಗ್ ಜ್ಯಾಮ್ ಆಗಿ ಪ್ರಯಾಣಿಕರನ್ನು ಬೇರೆ ರೈಲಿಗೆ ಕಳುಹಿಸಿದ ಘಟನೆ ನಡೆದಿದೆ.ನಿನ್ನೆ ಬೇರಿಂಗ್ ದೋಷ ಉಂಟಾಗಿ ಸಮಸ್ಯೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಬೇರೆ ರೈಲಿಗೆ ಕಳುಹಿಸಿದ ಪರಿಸ್ಥಿತಿ ನಿರ್ಮಾಣವಾಯಿತು. ಗಾಂಧಿನಗರ ಮುಂಬೈ ಮಾರ್ಗವಾಗಿ ಚಲಿಸುತ್ತಿದ್ದ ವೇಳೆ ರೈಲು ಎಮ್ಮೆಗಳ ಹಿಂಡಿಗೆ ಗುದ್ದಿದ ಪರಿಣಾಮ ಮೂರು ಎಮ್ಮೆಗಳು ಮೃತಪಟ್ಟಿದ್ದಲ್ಲದೆ ರೈಲು ಮುಂಭಾಗ […]