“ಶಿವಮೊಗ್ಗದಲ್ಲಿ ಶಾಲೆ-ಕಾಲೇಜು ಆರಂಭ ವಿಚಾರ ಡಿಸಿ ನಿರ್ಧಾರಕ್ಕೆ ಬಿಟ್ಟಿದ್ದು”

ಬೆಂಗಳೂರು,ಫೆ.22- ಶಿವಮೊಗ್ಗದಲ್ಲಿ ಶಾಲಾ- ಕಾಲೇಜು ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿಗಳು ನಿರ್ಧಾರ ಮಾಡುತ್ತಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ವಿಕಾಸಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಹಿಜಾಬ್‍ಗೊಂದಲ-ಶಾಲಾ-ಕಾಲೇಜು ನಡೆಯುತ್ತಿರುವ ಕುರಿತು ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಾಳೆಯಿಂದ ಯಥಾಸ್ಥಿತಿ ಕಾಯ್ದುಕೊಂಡು ಶಾಲಾ-ಕಾಲೇಜು ತೆರೆಯುತ್ತೇವೆ. ಇಂದು ಗಂಭೀರ ಪರಿಸ್ಥಿತಿ ಇದ್ದ ಕಾರಣ ಒಂದು ದಿನ ರಜೆ ನೀಡಲಾಗಿದೆ. ಇಷ್ಟು ದಿನಗಳ ಕಾಲ ಕಾಂಗ್ರೆಸ್ ನೀಡಿರುವ ಹೇಳಿಕೆಗಳನ್ನು ಜನ […]