ಆಂದ್ರದಲ್ಲಿ ಸದ್ದು ಮಾಡುತ್ತಿರುವ ಪ್ರತಿಷ್ಠಿತ ಕುಟುಂಬಗಳ ಹೆಣ್ಣು ಮಕ್ಕಳು

ಹೈದರಾಬಾದ್,ಡಿ.10- ತೆಲುಗು ನಾಡು ತೆಲಂಗಾಣದಲ್ಲಿ ಎರಡು ಪ್ರತಿಷ್ಠಿತ ಕುಟುಂಬಗಳ ಹೆಣ್ಣುಮಕ್ಕಳ ಸುದ್ದಿಗಳು ಕಳೆದ ಎರಡು ವಾರಗಳಿಂದಲೂ ನಿರಂತರವಾಗಿ ಪತ್ರಿಕೆಗಳ ಮುಖ ಪುಟಗಳಲ್ಲಿ ರಾರಾಜಿಸುತ್ತಿವೆ. ದೆಹಲಿಯ ಅಬಕಾರಿ ನೀತಿ ಅಕ್ರಮಗಳ ಪ್ರಕರಣದಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಕವಿತಾ ಅವರ ಹೆಸರು ಕೇಳಿಬಂದಿದೆ. ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಹೇಳಿಕೆ ದಾಖಲಿಸಿದ್ದಾರೆ. ಕವಿತಾ ಅವರ ವಿರುದ್ಧ ಇತ್ತೀಚೆಗೆ ರಾಜಕೀಯ ಟೀಕೆಗಳು ಹೆಚ್ಚಾಗಿವೆ. ಮತ್ತೊಂದು ಕಡೆ ಅವಿಭಜಿತ […]

ಮತ್ತೊಂದು ಜೀವವನ್ನು ಬಲಿಪಡೆದ ಬೆಂಗಳೂರಿನ ರಸ್ತೆಗುಂಡಿಗಳು..!

ಬೆಂಗಳೂರು,ಜ.30- ನಗರದಲ್ಲಿ ರಸ್ತೆ ಗುಂಡಿಯಿಂದಾಗಿ ಮತ್ತೊಮ್ಮೆ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಟ್ಟಿಗೆಪಾಳ್ಯದ ಶರ್ಮಿಳಾ (38) ಮಾಗಡಿ ಮುಖ್ಯರಸ್ತೆ ಅಂಜನಾನಗರದಲ್ಲಿ ರಸ್ತೆ ಗುಂಡಿಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತು ತಾವರೆಕೆರೆ ಕಡೆಗೆ ಮಹಿಳೆ ತೆರಳುತ್ತಿದ್ದರು. ಕಾವೇರಿ ನೀರಿನ ಪೈಪ್‍ಲೈನ್ ಅಳವಡಿಕೆಗಾಗಿ ಮಾಗಡಿ ಮುಖ್ಯರಸ್ತೆಯ ಅಂಜನಾನಗರದಿಂದ ದೊಡ್ಡ ಗೊಲ್ಲರಹಟ್ಟಿಯವರೆಗೆ ರಸ್ತೆಯನ್ನು ಅಗೆದು ಮುಚ್ಚದೆ ಹಾಗೇ ಬಿಡಲಾಗಿದೆ. ಇಲ್ಲಿನ ಹರಿಹರ ಪುತ್ರ ಅಯ್ಯಪ್ಪಸ್ವಾಮಿ ದೇವಸ್ಥಾನದ ಸಮೀಪ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ […]