ಮುರುಗಾ ಶರಣರ ಪೋಕ್ಸ್ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ..!

ಚಿತ್ರದುರ್ಗ,ನ.7- ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಕ್ಕಳಿಗೆ ಹಣ್ಣಿನಲ್ಲಿ ಮತ್ತುಭರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ. ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ನ್ಯಾಯಾಲಯಕ್ಕೆ ತನಿಖಾ ತಂಡ ಸಲ್ಲಿಸಿರುವ 694 ಪುಟಗಳ ಚಾರ್ಜ್ಶೀಟ್ನಲ್ಲಿ ಮುರುಘಾ ಶರಣರ ವಿರುದ್ಧವೇ 374 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ತನಿಖಾ ತಂಡ ಮುಖ್ಯಾಧಿಕಾರಿ ಡಿವೈಎಸ್ಪಿ ಅನಿಲ್ಕುಮಾರ್ ನೇತೃತ್ವದ […]
ಮುರುಘಾ ಶ್ರೀಗಳ ಪದಚ್ಯುತಿಗೆ ಹೆಚ್ಚಿದ ಒತ್ತಡ..

ಬೆಂಗಳೂರು,ಅ.15- ಪೋಕ್ಸೋ ಕಾಯ್ದೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘ ರಾಜೇಂದ್ರ ಶರಣರನ್ನು ಪೀಠಾಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಿ ಪರ್ಯಾಯ ಪೀಠಾಧ್ಯಕ್ಷರ ನೇಮಕಕ್ಕೆ ತಯಾರಿಗಳು ನಡೆಯುತ್ತಿವೆ. ಮುರುಘಾ ಶ್ರೀಗಳ ವಿರುದ್ಧ ದಿನಕ್ಕೊಂದು ನಂಬಲು ಅಸಾಧ್ಯವಾದ ಲೈಂಗಿಕ ಪ್ರಕರಣಗಳು ಹೊರ ಬರುತ್ತಿರುವ ಹಿನ್ನೆಲೆಯಲ್ಲಿ ಪೀಠದಿಂದ ಅವರನ್ನು ವಜಾಗೊಳಿಸಿ, ಹೊಸಬರನ್ನು ಪೀಠಾಧ್ಯಕ್ಷರನ್ನಾಗಿ ನೇಮಿಸಲು ಮಠದ ಹಾಗೂ ಸಾಮಾಜಿಕ ಒತ್ತಡ ಹೆಚ್ಚಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಚಿತ್ರದುರ್ಗ ಮುರುಘಾ ಮಠದ […]
ಲೈಂಗಿಕ ದೌರ್ಜನ್ಯ ಪ್ರಕರಣ : ಶ್ರೀಗಳಿಗೆ ಬಂಧನ ಭೀತಿ
ಬೆಂಗಳೂರು,ಆ.28- ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಶರಣ ಸ್ವಾಮೀಜಿಗಳಿಗೆ ಬಂಧನದ ಭೀತಿ ಎದುರಾಗಿದೆ. ಶ್ರೀಗಳ ವಿರುದ್ಧ ಆರೋಪ ಮಾಡಿರುವ ಇಬ್ಬರು ಬಾಲಕಿಯರನ್ನು ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ. ವಿಚಾರಣೆ ಸಂದರ್ಭದಲ್ಲಿ ಬಾಲಕಿಯರು ಶ್ರೀಗಳ ವಿರುದ್ಧ ಹೇಳಿಕೆ ನೀಡಿದರೆ ಮುರುಘಾ ಶ್ರೀಗಳನ್ನು ಬಂಧಿಸಬೇಕಾದ ಅನಿವಾರ್ಯತೆ ಪೊಲೀಸರಿಗೆ ಎದುರಾಗುವ ಸಾಧ್ಯತೆಗಳಿವೆ. ನಾಳೆ ಜಿಲ್ಲಾ ನ್ಯಾಯಾೀಧಿಶರ ಮುಂದೆ ಬಾಲಕಿಯರನ್ನು ಹಾಜರುಪಡಿಸುವ ಸಾಧ್ಯತೆಯಿದ್ದು, ನ್ಯಾಯಾೀಧಿಶರು ಅವರಿಂದ ಹೇಳಿಕೆ ಪಡೆಯಲಿದ್ದಾರೆ. ಒಂದು ವೇಳೆ ಮಠದಲ್ಲಿ ತಮಗೆ ಆರೋಪಿ ಸ್ಥಾನದಲ್ಲಿರುವ […]