ಮೋರ್ಬಿ ಸೇತುವೆ ದುರಂತ : ರಾಜ್ಯ ಹಾಗೂ ಕೇಂದ್ರ ಸರ್ಕಾರಗಳನ್ನು ದೂರಿದ ಶಿವಸೇನೆ

ಮುಂಬೈ, ನ.1- ಮೋರ್ಬಿ ತೂಗು ಸೇತುವೆ ದುರಂತದಲ್ಲಿ ಗುಜರಾತ್ ಮತ್ತು ಕೇಂದ್ರ ಸರ್ಕಾರದ ಹೊಣೆಗಾರಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಶಿವಸೇನೆಯ ಮುಖವಾಣಿ ಸಾಮ್ನಾ ಟೀಕಿಸಿದೆ.ಮರಾಠಿ ದೈನಿಕದ ಸಂಪಾದಕೀಯದಲ್ಲಿ ಘಟನೆಗೆ ಖಂಡನೆ ವ್ಯಕ್ತಪಡಿಸಲಾಗಿದೆ. 2016ರಲ್ಲಿ ಪಶ್ಚಿಮ ಬಂಗಾಳದಲ್ಲಿ ಇದೇ ರೀತಿಯ ದುರ್ಘಟನೆ ನಡೆದಿತ್ತು. ಆಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಕೀಯ ಸಮಾವೇಶದಲ್ಲಿ ಭಾಷಣ ಮಾಡಿ, ಅದನ್ನು ದೇವರ ಆಟ ಎಂದಿದ್ದರು. ಪಶ್ಚಮ ಬಂಗಾಳ ಸರ್ಕಾರವನ್ನು ಹೊಣೆಯಾಗಿಸಿದರು.ಈಗ ಗುಜರಾತ್ನಲ್ಲಿ ಅದೇ ರೀತಿಯ ದುರಂತ ನಡೆದಿದೆ. ಅನುಮಾನಾಸ್ಪದವಾಗಿ ಕುಸಿತವಾದ […]