“ಅಧಿಕಾರಕ್ಕಾಗಿ ಸಿದ್ದರಾಮಯ್ಯ ಸಿದ್ದರಹೀಮಯ್ಯ ಬೇಕಾದರೂ ಆಗ್ತಾರೆ”
ಮೈಸೂರು,ಫೆ.5- ಸಿದ್ದರಾಮಯ್ಯನವರು ಚುನಾವಣೆಗೋಸ್ಕರ ಸಿದ್ದರಹೀಮಯ್ಯ ಅಂತ ಬೇಕಾದರೂ ಬದಲಾಗಿ ಬಿಡುತ್ತಾರೆ. ಅಧಿಕಾರಕ್ಕೋಸ್ಕರ ಏನೂ ಬೇಕಾದರೂ ಹೇಳಿಕೆಗಳನ್ನು ನೀಡುತ್ತಾರೆ. ಅವರ ಹೇಳಿಕೆಗಳನ್ನು ನೀವು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಹಿಜಾಬ್ ಧರಿಸಿ ಶಾಲೆಗೆ ಬರುವುದು ಬೇಡ ಎಂದಿರುವುದು ಮುಸ್ಲಿಂ ಹೆಣ್ಣುಮಕ್ಕಳ ಸ್ವಾತಂತ್ರ್ಯ, ಶಿಕ್ಷಣ ಕಿತ್ತುಕೊಳ್ಳುವ ಷಡ್ಯಂತ್ರ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರ ಮಾತನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಡಿ. ಏಕೆಂದರೆ ಅವರು ರಾಜಕಾರಣಕ್ಕೋಸ್ಕರ ಬಹಳಷ್ಟು ಮಾತುಗಳನ್ನು ಆಡುತ್ತಿರುತ್ತಾರೆ. ಗೋರಿಪಾಳ್ಯದ […]