ಬ್ರೇಕಿಂಗ್ : ಸಾರ್ವಜನಿಕರ ಆಕ್ರೋಶದ ಬೆನ್ನಲ್ಲೇ ಪರಿಷ್ಕೃತ ವಿದ್ಯುತ್ ದರ ವಾಪಸ್.?
ಬೆಂಗಳೂರು,ಅ.3- ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಕಾರಣ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯಷ್ಟೇ ಪರಿಷ್ಕರಣೆ ಮಾಡಿದ್ದ ವಿದ್ಯುತ್ ದರವನ್ನು ಹಿಂಪಡೆಯಲು ತೀರ್ಮಾನಿಸಿದೆ. ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ದರ ಪರಿಷ್ಕರಣೆಯಿಂದಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಸರ್ಕಾರ ಪರಿಷ್ಕøತ ದರವನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂಧನ ಸಚಿವ ಸುನೀಲ್ಕುಮಾರ್ ಅವರು ಚರ್ಚಿಸಿ ಪರಿಷ್ಕøತ ದರವನ್ನು ಕೈಬಿಡಲಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ಈ […]
ಕರೆಂಟ್ ಶಾಕ್ : ಹಬ್ಬದ ಸಂಭ್ರಮದಲ್ಲಿದ್ದ ಜನರ ಹೊಟ್ಟೆ ಉರಿಸಿದ ಸರ್ಕಾರ
ಬೆಂಗಳೂರು,ಅ.1- ನವರಾತ್ರಿ ಹಬ್ಬ ಹೊಸ್ತಿಲಲ್ಲಿರುವ ರಾಜ್ಯದ ಜನತೆಗೆ ಸರ್ಕಾರ ವಿದ್ಯುತ್ ದರ ಏರಿಕೆಯ ಶಾಕ್ ಕೊಟ್ಟಿದೆ.ವಿದ್ಯುತ್ ಪೂರೈಕೆ ಮಾಡುವ ಕಂಪನಿಗಳ ಕೋರಿಕೆಯಂತೆ ಇಂದಿನಿಂದಲೇ ಜಾರಿಯಾ ಗುವಂತೆ ಪ್ರತಿ ಯೂನಿಟ್ಗೆ23ರಿಂದ 43 ಪೈಸೆ ಬೆಲೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ ನಿಯಂ ತ್ರಣ ಆಯೋಗ ಆದೇಶ ಹೊರಡಿಸಿದೆ. ನೂತನ ದರವು ಇಂದಿನಿಂದಲೇ ಜಾರಿಯಾಗಲಿದ್ದು, ಪ್ರತಿ ಯೂನಿಟ್ಗೆ ಬೆಸ್ಕಾಂ ವ್ಯಾಪ್ತಿಲ್ಲಿ 24 ಪೈಸೆ, ಸೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ 32 ಪೈಸೆ ಹಾಗೂ ಹೆಸ್ಕಾಂ, ಜೆಸ್ಕಾಂ ವ್ಯಾಪ್ತಿಯಲ್ಲಿ 35 ಪೈಸೆ ವಿದ್ಯುತ್ […]