ಮಧ್ಯರಾತ್ರಿ ಧಗಧಗಿಸಿದ ಮನೆ, ಒಂದೇ ಕುಟುಂಬದ 6 ಮಂದಿ ಸಜೀವ ದಹನ

ಹೈದರಾಬಾದ್,ಡಿ.17- ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಢನಿದ್ರೆಯಲ್ಲಿದ್ದ ಕುಟುಂಬವೊಂದರ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮ ಕಂದಾಯ ಸಹಾಯಕ ಮಸುಶಿವಯ್ಯ (50) ಅವರ ಪತ್ನಿ ಪದ್ಮ (45), ಪದ್ಮ ಅವರ ಅಕ್ಕನ ಮಗಳು ಮೌನಿಕಾ (23) ಆಕೆಯ ಇಬ್ಬರು ಹೆಣ್ಣು ಮಕ್ಕಳಾದ ಹಿಮಬಿಂಧು, ಸ್ವೀಟಿ, ಸಂಬಂಧಿಕರಾದ ಶಾಂತಯ್ಯ ಸಜೀವಂತ ದಹನವಾಗಿದ್ದಾರೆ. ರಾಮಕೃಷ್ಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ 12 ಗಂಟೆ […]
ಚಾಕೊಲೇಟ್ ತಿಂದ 9 ವರ್ಷದ ಬಾಲಕ ಉಸಿರುಗಟ್ಟಿ ಸಾವು

ಹೈದರಾಬಾದ್,ನ.28- ಶಾಲೆಯಲ್ಲಿ ಚಾಕೊಲೇಟ್ ತಿಂದ 9 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ವಾರಂಗಲ್ನಲ್ಲಿ ನಡೆದಿದೆ.ಮೃತನನ್ನು ಸಂದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ನಗರದ ಶಾರದಾ ಪ್ರೌಢಶಾಲೆಯ ಎರಡನೇ ತರಗತಿಯಲ್ಲಿ ಓದುತ್ತಿದ್ದ ಸಂದೀಪ್ ಸಿಂಗ್ ಶಾಲೆಗೆ ಪ್ರತಿ ದಿನ ಚಾಕಲೇಟ್ ಒಯ್ಯುವುದು ಅಭ್ಯಾಸವಾಗಿತ್ತು. ಅದೇ ರೀತಿ ಕಳೆದ ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಚಾಕಲೇಟ್ ತಿನ್ನುತ್ತಿದ್ದ ಬಾಲಕ ಉಸಿರುಗಟ್ಟಿಕೊಂಡಿದ್ದಾನೆ. ಕೂಡಲೆ ಎಚ್ಚೆತ್ತ ಶಿಕ್ಷಕರು ಗಂಟಲಿಗೆ ಸಿಕ್ಕಿಕೊಂಡಿದ ಚಾಕಲೇಟ್ ತೆಗೆಯಲು ಪ್ರಯತ್ನಿಸಿ ನಂತರ ವಾರಂಗಲ್ನ ಎಂಜಿಎಂ ಆಸ್ಪತ್ರೆಗೆ ದಾಖಲಿಸಿದ್ದಾರೆ […]