ಚುಟುಕು ವಿಶ್ವಕಪ್ನಲ್ಲಿ ಶಮಿ, ಸಿರಾಜ್, ಠಾಕೂರ್ಗೆ ಅವಕಾಶ

ನವದೆಹಲಿ, ಅ.12- ಕಾಂಗರೂ ನಾಡಿನಲ್ಲಿ ನಡೆಯಲಿರುವ 8ನೆ ಚುಟುಕು ವಿಶ್ವಕಪ್ಗೆ ದಿನಗಣನೆ ಶುರುವಾಗಿರುವಾಗಲೇ ಭಾರತದ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಹೆಚ್ಚಾಗುತ್ತಾ ಸಾಗುತ್ತಿದೆ. ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬೂಮ್ರಾ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದರು, ಅವರು ಇನ್ನೂ ಸಂಪೂರ್ಣವಾಗಿ ಫಿಟ್ನೆಸ್ಗೊಳ್ಳದ ಕಾರಣ ವಿಶ್ವಕಪ್ನಿಂದಲೂ ಹೊರ ನಡೆದಿದ್ದಾರೆ. ಅವರ ಸ್ಥಾನವನ್ನು ತುಂಬಬಲ್ಲ ಸಮರ್ಥ ಬೌಲರ್ ಎಂದು ಗುರುತಿಸಿಕೊಂಡಿದ್ದ ನೆಟ್ ಬೌಲರ್ ದೀಪಕ್ ಚಹರ್ ಕೂಡ ಗಾಯಗೊಂಡು ದಕ್ಷಿಣ ಆಫ್ರಿಕಾ ಸರಣಿಯಿಂದ […]