ಅನಿತಾಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ

ಬೆಂಗಳೂರು,ಫೆ.22- ಕಾರ್ಯಕ್ರಮಕ್ಕೆ ಕರೆಯದೆ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂಬ ಶಾಸಕಿ ಅನಿತಾಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವರು, ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನೆ ವೇಳೆ ಅನಿತಾ ಕುಮಾರಸ್ವಾಮಿ ಅವರಿಗೆ ಅಪಮಾನಿಸಲಾಗಿದೆ ಎಂಬರ್ಥದ ಮಾತನ್ನು ಕೇಳಿ ಆಶ್ಚರ್ಯವಾಯಿತು. ಕಾರ್ಯಕ್ರಮ ಶಿಷ್ಟಾಚಾರದ ಪ್ರಕಾರವೇ ಜರುಗಿದರೂ ನಿಗದಿತ ಸಮಯಕ್ಕೆ ಹಾಜರಾಗದೇ, ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ […]
ಸಂಚಾರಿ ನಿಯಮ ಉಲ್ಲಂಘನೆ ಸೆರೆ ಹಿಡಿಯಲು ಬಂದಿವೆ ಐಟಿಎಂ ಕ್ಯಾಮರಾಗಳು

ಬೆಂಗಳೂರು,ಡಿ.9- ಇನ್ಮುಂದೆ ನಗರದಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿದರೆ, ರೂಲ್ಸ್ ಬ್ರೇಕ್ ಮಾಡಿದರೆ ಮುಲಾಜಿಲ್ಲದೆ ದಂಡ ಪಾವತಿಸಲಬೇಕು. ಏಕೆಂದರೆ, ವಾಹನ ಸವಾರರ ಮೇಲೆ ಸಂಚಾರಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಅವರ ಕಣ್ತಪ್ಪಿಸಿ ಬಚಾವಾಗಲು ಸಾಧ್ಯವೇ ಇಲ್ಲ. ಪೊಲೀಸರು ಇಲ್ಲ ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸ ಬಹುದು, ತ್ರಿಬಲ್ ರೈಡಿಂಗ್ ಹೋಗಬಹುದು, ಸಿಗ್ನಲ್ನಲ್ಲಿ ಯಾರು ಇಲ್ಲ ಎಂದು ಸಿಗ್ನಲ್ ಜಂಪ್ ಮಾಡಬಹುದು ಎಂದು ಭಾವಿಸಿಕೊಂಡಿದ್ದರೆ ನಿಮ್ಮ ಊಹೆ ತಪ್ಪು ಯಾಕೆಂದರೆ ನೀವು ಯಾರಿಗೂ ತಿಳಿಯದಂತೆ ಮಾಡುವ ತಪ್ಪು ರಹಸ್ಯ ಕ್ಯಾಮರಾದಲ್ಲಿ […]