ಕಾಂಗ್ರೆಸ್ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿಲ್ಲ: ಬಿಎಸ್ವೈ

ಶಿವಮೊಗ್ಗ,ನ.18- ಮತದಾರರ ಖಾಸಗಿ ಡೇಟಾವನ್ನು ಕಲೆ ಹಾಕಲಾಗಿದೆ ಎಂಬ ಪ್ರತಿಪಕ್ಷ ಕಾಂಗ್ರೆಸ್ನವರ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೋಲುವ ಹತಾಶೆಯಿಂದ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಆಧಾರವಿಲ್ಲದೆ ಮಾತನಾಡುವವರ ಬಗ್ಗೆ ಚರ್ಚೆ ಮಾಡುವುದೇ ಅಪ್ರಸ್ತುತ ಎಂದು ಹೇಳಿದರು. ಸೋಲುವ ಭೀತಿಯಿಂದ ಕಾಂಗ್ರೆಸ್ ಜನರ ಗಮನವನ್ನು ಬೇರೆಡೆ ಸೆಳೆಯಲು ಸುಳ್ಳು ಹೇಳುತ್ತಿದ್ದಾರೆ. ದಾಖಲೆಗಳಿದ್ದರೆ ಅವರು ಸಂಬಂಧಪಟ್ಟವರಿಗೆ ದೂರು ನೀಡಲಿ. ತನಿಖೆ ನಡೆದ ನಂತರ ಸತ್ಯಾಂಶ ಗೊತ್ತಾಗುತ್ತದೆ. ಅಲ್ಲಿಯ […]